ವಿದ್ಯುತ್ ಕಂಬಕ್ಕೆ ಕಂಟೈನರ್ ಲಾರಿ ಡಿಕ್ಕಿ: ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ವಿದ್ಯುತ್ ತಂತಿಗಳು: ಸಂಚಾರ ಅಸ್ತವ್ಯಸ್ತ: ತಪ್ಪಿದ ಭಾರೀ ಅನಾಹುತ

ವಿದ್ಯುತ್ ಕಂಬಕ್ಕೆ ಕಂಟೈನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಬ್ಬಿಣದ ವಿದ್ಯುತ್ ಕಂಬ ಬುಡದ ಸಮೇತ ಕಿತ್ತುಬಂದಿದ್ದು, ಮನೆಗಳಿಗೆ ಹಾದುಹೋಗಿರುವ ವಿದ್ಯುತ್ ತಂತಿಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಘಟನೆ  ಇಂದು ಬೆಳಗ್ಗೆ ಸುಮಾರು 7 ಗಂಟೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಅರಳುಮಲ್ಲಿಗೆ ಗ್ರಾಮದಲ್ಲಿ ನಡೆದಿದೆ….

ವಿದ್ಯುತ್ ಕಂಬಗಳು ಹಾಗೂ ವಿದ್ಯುತ್ ತಂತಿಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಕಾರಣ ವಿದ್ಯುತ್ ಶಾಕ್ ಭಯದಿಂದ ಜನರು ಭಯಭೀತರಾಗಿದ್ದಾರೆ. ಅದೇರೀತಿ ನೆಲಮಂಗಲ ಹಾಗೂ ದೊಡ್ಡಬಳ್ಳಾಪುರಕ್ಕೆ ಬರುವ ಹಾಗೂ ಹೋಗುವ ವಾಹನಗಳು ರಸ್ತೆಯಲ್ಲೇ ನಿಂತಿವೆ.

ಇಂದು ಬೆಳಗ್ಗೆ ಸುಮಾರು 7 ಗಂಟೆಯಲ್ಲಿ ದೊಡ್ಡಬಳ್ಳಾಪುರದಿಂದ ನೆಲಮಂಗಲ ಕಡೆ ಹರಿಯಾಣ ಮೂಲದ ಕಂಟೈನರ್ ಲಾರಿ ರಸ್ತೆ ಬದಿಯಲ್ಲಿದ್ದ ಕಬ್ಬಣಿದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ… ಇದರಿಂದ ಬುಡದ ಸಮೇತ ವಿದ್ಯುತ್ ಕಂಬ ಕಿತ್ತುಬಂದು ನಡು ರಸ್ತೆಯಲ್ಲಿ ಬಿದ್ದಿದೆ. ಈ ಕಂಬದಿಂದ ಬೇರೆ ಕಂಬಗಳಿಗೆ ಹಾದು ಹೋಗಿರುವ ವಿದ್ಯುತ್ ಲೈನ್ ಗಳು ಸಹ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಇದರಿಂದ ಸಾರ್ವಜನಿಕರು, ವಾಹನ ಸವಾರರಿಗೆ ತೀವ್ರ ತೊಂದರೆ ಉಂಟಾಗಿದೆ….

ನೆಲಮಂಗಲ ಹಾಗೂ ದೊಡ್ಡಬಳ್ಳಾಪುರ ರಸ್ತೆಯು  ಅರಳುಮಲ್ಲಿಗೆ ಗ್ರಾಮದಲ್ಲಿ ಹಾದುಹೋಗುತ್ತದೆ. ಗ್ರಾಮದಲ್ಲಿ ರಸ್ತೆ ವಿಸ್ತರಣೆ ಆಗಿಲ್ಲ. ಐದಾರು ಅಡಿ ಆಳದಷ್ಟು ರಸ್ತೆ ಗುಂಡಿಗಳು ರಸ್ತೆಯಲ್ಲಿ ಬಿದ್ದಿದ್ದರು ಮುಚ್ಚಿಲ್ಲ. ಭಾರೀ ಗ್ರಾತ್ರದ ವಾಹನಗಳು ಟೋಲ್ ತಪ್ಪಿಸಲು ಈ ಮಾರ್ಗದಲ್ಲಿ ಬಂದು ಗ್ರಾಮದ ಜನತೆಗೆ ತುಂಬಾ ತೊಂದರೆ ಕೊಡುತ್ತಿದ್ದಾರೆ ಎಂದು ಊರಿನ‌ ಗ್ರಾಮಸ್ಥರು ಆಕ್ರೋಶವ್ಯಕ್ತಪಡಿಸಿದರು…

Ramesh Babu

Journalist

Recent Posts

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

17 hours ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

19 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

20 hours ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

1 day ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

1 day ago