ವಿದ್ಯುತ್ ಕಂಬಕ್ಕೆ ಕಂಟೈನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಬ್ಬಿಣದ ವಿದ್ಯುತ್ ಕಂಬ ಬುಡದ ಸಮೇತ ಕಿತ್ತುಬಂದಿದ್ದು, ಮನೆಗಳಿಗೆ ಹಾದುಹೋಗಿರುವ ವಿದ್ಯುತ್ ತಂತಿಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಘಟನೆ ಇಂದು ಬೆಳಗ್ಗೆ ಸುಮಾರು 7 ಗಂಟೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಅರಳುಮಲ್ಲಿಗೆ ಗ್ರಾಮದಲ್ಲಿ ನಡೆದಿದೆ….
ವಿದ್ಯುತ್ ಕಂಬಗಳು ಹಾಗೂ ವಿದ್ಯುತ್ ತಂತಿಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಕಾರಣ ವಿದ್ಯುತ್ ಶಾಕ್ ಭಯದಿಂದ ಜನರು ಭಯಭೀತರಾಗಿದ್ದಾರೆ. ಅದೇರೀತಿ ನೆಲಮಂಗಲ ಹಾಗೂ ದೊಡ್ಡಬಳ್ಳಾಪುರಕ್ಕೆ ಬರುವ ಹಾಗೂ ಹೋಗುವ ವಾಹನಗಳು ರಸ್ತೆಯಲ್ಲೇ ನಿಂತಿವೆ.
ಇಂದು ಬೆಳಗ್ಗೆ ಸುಮಾರು 7 ಗಂಟೆಯಲ್ಲಿ ದೊಡ್ಡಬಳ್ಳಾಪುರದಿಂದ ನೆಲಮಂಗಲ ಕಡೆ ಹರಿಯಾಣ ಮೂಲದ ಕಂಟೈನರ್ ಲಾರಿ ರಸ್ತೆ ಬದಿಯಲ್ಲಿದ್ದ ಕಬ್ಬಣಿದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ… ಇದರಿಂದ ಬುಡದ ಸಮೇತ ವಿದ್ಯುತ್ ಕಂಬ ಕಿತ್ತುಬಂದು ನಡು ರಸ್ತೆಯಲ್ಲಿ ಬಿದ್ದಿದೆ. ಈ ಕಂಬದಿಂದ ಬೇರೆ ಕಂಬಗಳಿಗೆ ಹಾದು ಹೋಗಿರುವ ವಿದ್ಯುತ್ ಲೈನ್ ಗಳು ಸಹ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಇದರಿಂದ ಸಾರ್ವಜನಿಕರು, ವಾಹನ ಸವಾರರಿಗೆ ತೀವ್ರ ತೊಂದರೆ ಉಂಟಾಗಿದೆ….
ನೆಲಮಂಗಲ ಹಾಗೂ ದೊಡ್ಡಬಳ್ಳಾಪುರ ರಸ್ತೆಯು ಅರಳುಮಲ್ಲಿಗೆ ಗ್ರಾಮದಲ್ಲಿ ಹಾದುಹೋಗುತ್ತದೆ. ಗ್ರಾಮದಲ್ಲಿ ರಸ್ತೆ ವಿಸ್ತರಣೆ ಆಗಿಲ್ಲ. ಐದಾರು ಅಡಿ ಆಳದಷ್ಟು ರಸ್ತೆ ಗುಂಡಿಗಳು ರಸ್ತೆಯಲ್ಲಿ ಬಿದ್ದಿದ್ದರು ಮುಚ್ಚಿಲ್ಲ. ಭಾರೀ ಗ್ರಾತ್ರದ ವಾಹನಗಳು ಟೋಲ್ ತಪ್ಪಿಸಲು ಈ ಮಾರ್ಗದಲ್ಲಿ ಬಂದು ಗ್ರಾಮದ ಜನತೆಗೆ ತುಂಬಾ ತೊಂದರೆ ಕೊಡುತ್ತಿದ್ದಾರೆ ಎಂದು ಊರಿನ ಗ್ರಾಮಸ್ಥರು ಆಕ್ರೋಶವ್ಯಕ್ತಪಡಿಸಿದರು…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…