ವಿದ್ಯುತ್ ಕಂಬಕ್ಕೆ ಕಂಟೈನರ್ ಲಾರಿ ಡಿಕ್ಕಿ: ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ವಿದ್ಯುತ್ ತಂತಿಗಳು: ಸಂಚಾರ ಅಸ್ತವ್ಯಸ್ತ: ತಪ್ಪಿದ ಭಾರೀ ಅನಾಹುತ

ವಿದ್ಯುತ್ ಕಂಬಕ್ಕೆ ಕಂಟೈನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಬ್ಬಿಣದ ವಿದ್ಯುತ್ ಕಂಬ ಬುಡದ ಸಮೇತ ಕಿತ್ತುಬಂದಿದ್ದು, ಮನೆಗಳಿಗೆ ಹಾದುಹೋಗಿರುವ ವಿದ್ಯುತ್ ತಂತಿಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಘಟನೆ  ಇಂದು ಬೆಳಗ್ಗೆ ಸುಮಾರು 7 ಗಂಟೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಅರಳುಮಲ್ಲಿಗೆ ಗ್ರಾಮದಲ್ಲಿ ನಡೆದಿದೆ….

ವಿದ್ಯುತ್ ಕಂಬಗಳು ಹಾಗೂ ವಿದ್ಯುತ್ ತಂತಿಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಕಾರಣ ವಿದ್ಯುತ್ ಶಾಕ್ ಭಯದಿಂದ ಜನರು ಭಯಭೀತರಾಗಿದ್ದಾರೆ. ಅದೇರೀತಿ ನೆಲಮಂಗಲ ಹಾಗೂ ದೊಡ್ಡಬಳ್ಳಾಪುರಕ್ಕೆ ಬರುವ ಹಾಗೂ ಹೋಗುವ ವಾಹನಗಳು ರಸ್ತೆಯಲ್ಲೇ ನಿಂತಿವೆ.

ಇಂದು ಬೆಳಗ್ಗೆ ಸುಮಾರು 7 ಗಂಟೆಯಲ್ಲಿ ದೊಡ್ಡಬಳ್ಳಾಪುರದಿಂದ ನೆಲಮಂಗಲ ಕಡೆ ಹರಿಯಾಣ ಮೂಲದ ಕಂಟೈನರ್ ಲಾರಿ ರಸ್ತೆ ಬದಿಯಲ್ಲಿದ್ದ ಕಬ್ಬಣಿದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ… ಇದರಿಂದ ಬುಡದ ಸಮೇತ ವಿದ್ಯುತ್ ಕಂಬ ಕಿತ್ತುಬಂದು ನಡು ರಸ್ತೆಯಲ್ಲಿ ಬಿದ್ದಿದೆ. ಈ ಕಂಬದಿಂದ ಬೇರೆ ಕಂಬಗಳಿಗೆ ಹಾದು ಹೋಗಿರುವ ವಿದ್ಯುತ್ ಲೈನ್ ಗಳು ಸಹ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಇದರಿಂದ ಸಾರ್ವಜನಿಕರು, ವಾಹನ ಸವಾರರಿಗೆ ತೀವ್ರ ತೊಂದರೆ ಉಂಟಾಗಿದೆ….

ನೆಲಮಂಗಲ ಹಾಗೂ ದೊಡ್ಡಬಳ್ಳಾಪುರ ರಸ್ತೆಯು  ಅರಳುಮಲ್ಲಿಗೆ ಗ್ರಾಮದಲ್ಲಿ ಹಾದುಹೋಗುತ್ತದೆ. ಗ್ರಾಮದಲ್ಲಿ ರಸ್ತೆ ವಿಸ್ತರಣೆ ಆಗಿಲ್ಲ. ಐದಾರು ಅಡಿ ಆಳದಷ್ಟು ರಸ್ತೆ ಗುಂಡಿಗಳು ರಸ್ತೆಯಲ್ಲಿ ಬಿದ್ದಿದ್ದರು ಮುಚ್ಚಿಲ್ಲ. ಭಾರೀ ಗ್ರಾತ್ರದ ವಾಹನಗಳು ಟೋಲ್ ತಪ್ಪಿಸಲು ಈ ಮಾರ್ಗದಲ್ಲಿ ಬಂದು ಗ್ರಾಮದ ಜನತೆಗೆ ತುಂಬಾ ತೊಂದರೆ ಕೊಡುತ್ತಿದ್ದಾರೆ ಎಂದು ಊರಿನ‌ ಗ್ರಾಮಸ್ಥರು ಆಕ್ರೋಶವ್ಯಕ್ತಪಡಿಸಿದರು…

Ramesh Babu

Journalist

Recent Posts

ಮದುವೆ ಸಂಭ್ರಮದ ನಡುವೆ ಬೈಕ್ ಗೆ ಬೆಂಕಿ ಇಟ್ಟ ಕಿಡಿಗೇಡಿಗಳು

ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…

4 hours ago

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಹಿನ್ನೆಲೆ: ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…

4 hours ago

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

15 hours ago

ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಿ ಮಾನವೀಯತೆ ಮೆರೆದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…

17 hours ago

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

18 hours ago

ಬೆಂ ಗ್ರಾ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ತಡೆ: ಜಿಲ್ಲಾಧಿಕಾರಿ ಡಾ. ಅನುರಾಧ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…

19 hours ago