ವಿದ್ಯುತ್ ಕಂಬಕ್ಕೆ ಕಂಟೈನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಬ್ಬಿಣದ ವಿದ್ಯುತ್ ಕಂಬ ಬುಡದ ಸಮೇತ ಕಿತ್ತುಬಂದಿದ್ದು, ಮನೆಗಳಿಗೆ ಹಾದುಹೋಗಿರುವ ವಿದ್ಯುತ್ ತಂತಿಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಘಟನೆ ಇಂದು ಬೆಳಗ್ಗೆ ಸುಮಾರು 7 ಗಂಟೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಅರಳುಮಲ್ಲಿಗೆ ಗ್ರಾಮದಲ್ಲಿ ನಡೆದಿದೆ….
ವಿದ್ಯುತ್ ಕಂಬಗಳು ಹಾಗೂ ವಿದ್ಯುತ್ ತಂತಿಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಕಾರಣ ವಿದ್ಯುತ್ ಶಾಕ್ ಭಯದಿಂದ ಜನರು ಭಯಭೀತರಾಗಿದ್ದಾರೆ. ಅದೇರೀತಿ ನೆಲಮಂಗಲ ಹಾಗೂ ದೊಡ್ಡಬಳ್ಳಾಪುರಕ್ಕೆ ಬರುವ ಹಾಗೂ ಹೋಗುವ ವಾಹನಗಳು ರಸ್ತೆಯಲ್ಲೇ ನಿಂತಿವೆ.
ಇಂದು ಬೆಳಗ್ಗೆ ಸುಮಾರು 7 ಗಂಟೆಯಲ್ಲಿ ದೊಡ್ಡಬಳ್ಳಾಪುರದಿಂದ ನೆಲಮಂಗಲ ಕಡೆ ಹರಿಯಾಣ ಮೂಲದ ಕಂಟೈನರ್ ಲಾರಿ ರಸ್ತೆ ಬದಿಯಲ್ಲಿದ್ದ ಕಬ್ಬಣಿದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ… ಇದರಿಂದ ಬುಡದ ಸಮೇತ ವಿದ್ಯುತ್ ಕಂಬ ಕಿತ್ತುಬಂದು ನಡು ರಸ್ತೆಯಲ್ಲಿ ಬಿದ್ದಿದೆ. ಈ ಕಂಬದಿಂದ ಬೇರೆ ಕಂಬಗಳಿಗೆ ಹಾದು ಹೋಗಿರುವ ವಿದ್ಯುತ್ ಲೈನ್ ಗಳು ಸಹ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಇದರಿಂದ ಸಾರ್ವಜನಿಕರು, ವಾಹನ ಸವಾರರಿಗೆ ತೀವ್ರ ತೊಂದರೆ ಉಂಟಾಗಿದೆ….
ನೆಲಮಂಗಲ ಹಾಗೂ ದೊಡ್ಡಬಳ್ಳಾಪುರ ರಸ್ತೆಯು ಅರಳುಮಲ್ಲಿಗೆ ಗ್ರಾಮದಲ್ಲಿ ಹಾದುಹೋಗುತ್ತದೆ. ಗ್ರಾಮದಲ್ಲಿ ರಸ್ತೆ ವಿಸ್ತರಣೆ ಆಗಿಲ್ಲ. ಐದಾರು ಅಡಿ ಆಳದಷ್ಟು ರಸ್ತೆ ಗುಂಡಿಗಳು ರಸ್ತೆಯಲ್ಲಿ ಬಿದ್ದಿದ್ದರು ಮುಚ್ಚಿಲ್ಲ. ಭಾರೀ ಗ್ರಾತ್ರದ ವಾಹನಗಳು ಟೋಲ್ ತಪ್ಪಿಸಲು ಈ ಮಾರ್ಗದಲ್ಲಿ ಬಂದು ಗ್ರಾಮದ ಜನತೆಗೆ ತುಂಬಾ ತೊಂದರೆ ಕೊಡುತ್ತಿದ್ದಾರೆ ಎಂದು ಊರಿನ ಗ್ರಾಮಸ್ಥರು ಆಕ್ರೋಶವ್ಯಕ್ತಪಡಿಸಿದರು…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…
ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…