ವಿದ್ಯುತ್ ಕಂಬದಿಂದ ತುಂಡಾಗಿ ಕೆಳಗೆ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಕಾರ್ನಾಳ ಗ್ರಾಮದಲ್ಲಿ ಇಂದು ಸಂಜೆ ನಡೆದಿದೆ…..
ಲಲಿತಮ್ಮ (55), ಸಂಜಯ್(45) ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರುವ ದುರ್ದೈವಿಗಳು. ಲಕ್ಷ್ಮಿದೇವಿ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ….
ವಿದ್ಯುತ್ ಕಂಬದಿಂದ ಮನೆಗೆ ಎಳೆದಿದ್ದ ವಿದ್ಯುತ್ ತಂತಿ ತುಂಡಾಗಿ ಕೆಳಗೆ ಬಿದ್ದುತ್ತು. ಇದನ್ನು ಗಮನಿಸದ ಲಲಿತಮ್ಮ ಒಣಗಾಕಿದ್ದ ಬಟ್ಟೆಯನ್ನು ತೆಗೆದುಕೊಳ್ಳಲು ಹೋದಾಗ ವಿದ್ಯುತ್ ತಂತಿ ಸ್ಪರ್ಶಿಸಿದೆ. ಇದನ್ನು ಗಮನಿಸಿದ ಸಂಜಯ್ ಲಲಿತಮ್ಮನನ್ನು ಕಾಪಾಡಲು ಹೋದಾಗ ಅವರಿಗೂ ವಿದ್ಯುತ್ ಸ್ಪರ್ಶಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಂಜಯ್ ಅವರನ್ನು ಕಾಪಾಡಲು ಲಕ್ಷ್ಮಿದೇವಿ ಮುಂದಾಗಿದ್ದಾಗ ಅವರಿಗೂ ಅಲ್ಪ ಪ್ರಮಾಣದಲ್ಲಿ ವಿದ್ಯುತ್ ಸ್ಪರ್ಶಿಸಿದ್ಧರಿಂದ ಕೈಗಳಿಗೆ ಸುಟ್ಟ ಗಾಯಳಾಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ….
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಹಾಗೂ ಬೆಸ್ಕಾಂ ಇಲಾಖೆ ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….
ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…
ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…
ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…
ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…
ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…