ದೊಡ್ಡಬಳ್ಳಾಪುರ ತಾಲೂಕು ಕರ್ನಾಟಕ ರಾಜ್ಯ ನೇಕಾರರ ಸಂಘಟನೆಗಳ ಒಕ್ಕೂಟ, ಮಾಜಿ ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದ ತಂಡ ಜವಳಿ, ಕಬ್ಬು ಮತ್ತು ಸಕ್ಕರೆ ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ.ಎಸ್ ಪಾಟೀಲ ಅವರನ್ನು
ಭೇಟಿ ಮಾಡಿ ರಾಜ್ಯ ನೇಕಾರರ ಸಮಸ್ಯೆಗಳ ಬಗ್ಗೆ ವಿವರಿಸಿ ಹಲವಾರು ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಿದ್ದಾರೆ.
ಮುಖ್ಯವಾಗಿ ವಿದ್ಯುತ್ ಬೆಲೆ ಏರಿಕೆ ದುಬಾರಿಯಾಗಿದ್ದು ತಕ್ಷಣ ಹಿಂಪಡೆಯಬೇಕು ಹಾಗೂ ನೇಕಾರರು ಮಗ್ಗಗಳಿಗೆ 20 ಎಚ್ಪಿ ವರೆಗಿನ ವಿದ್ಯುತ್ ಉಚಿತವಾಗಿ ನೀಡಬೇಕು, ಕರ್ನಾಟಕ ರಾಜ್ಯ ನೇಕಾರರ ಹಿತರಕ್ಷಣಾ ಸಮಿತಿಯ ನೇತೃತ್ವದಲ್ಲಿ ನೇಕಾರರಿಗೆ ಗುರುತಿನ ಚೀಟಿಯನ್ನು ನೀಡಲು ದೊಡ್ಡಬಳ್ಳಾಪುರದಲ್ಲಿ ಬೃಹತ್ ಹೋರಾಟ ನಡೆಸಿ ಒತ್ತಾಯಿಸಲಾಗಿತ್ತು, ಹೋರಾಟದ ಫಲವಾಗಿ ಈಗ ರಾಜ್ಯದಲ್ಲಿ ಸೆನ್ಸಸ್ ಕಾರ್ಯ ಮುಗಿದಿದ್ದು ಇಡೀ ರಾಜ್ಯದ ನೇಕಾರರಿಗೆ ತಕ್ಷಣ ನೇಕಾರ ಗುರುತಿನ ಚೀಟಿಯನ್ನು ನೀಡಬೇಕು, ನೇಕಾರರ ಕಲ್ಯಾಣ ಮಂಡಳಿಯನ್ನು ರಚಿಸಿ ರಾಜ್ಯದ ಕಟ್ಟಡ ಕಾರ್ಮಿಕರಿಗೆ ನೀಡುತ್ತಿರುವ ರೀತಿಯಲ್ಲಿ ಇ.ಎಸ್.ಐ ಸೇರಿದಂತೆ 20 ಸೌಲಭ್ಯಗಳನ್ನು ನೇಕಾರರಿಗೂ ನೀಡಬೇಕು ಮತ್ತು ಈ ಕಲ್ಯಾಣ ಮಂಡಳಿಗೆ ಒಂದು ಸಾವಿರ ಕೋಟಿಯ ಆವರ್ತ ನಿಧಿಯನ್ನು ಮೀಸಲಿಡಬೇಕು. ನೇಕಾರರು ಸ್ವಯಂ ಉದ್ಯೋಗಕ್ಕೆ ಖರೀದಿಸುವ ಮಗ್ಗಗಳಿಗೆ ಮತ್ತು ಜಾಕಾರ್ಡುಗಳಿಗೆ ಶೇ.75ರಷ್ಟು ಸಹಾಯಧನ ನೀಡಬೇಕು. ವಿದ್ಯುತ್ ಕ್ಷೇತ್ರದ ಖಾಸಗೀಕರಣವನ್ನು ತಡೆಯಬೇಕು ಎಂದು ಆಗ್ರಹಿಸಿದರು.
ಸಚಿವ ಶಿವಾನಂದ ಪಾಟೀಲ್ ಅವರು ಮಾತನಾಡಿ, ನಿಮ್ಮ ಎಲ್ಲಾ ಬೇಡಿಕೆಗಳ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತಂದು ತಕ್ಷಣಕ್ಕೆ ಮಾಡಬಹುದಾದ ಮತ್ತು ದೀರ್ಘಾವಧಿಯಲ್ಲಿ ಮಾಡಬಹುದಾದ ಯೋಜನೆಗಳ ಬಗ್ಗೆ ಚರ್ಚಿಸಲಾಗುವುದು ಮತ್ತು ಸಾಧ್ಯವಾದಷ್ಟು ಬೇಗ ಅನುಷ್ಠಾನಕ್ಕೆ ಬರುವಂತೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಈ ವೇಳೆ ಮುಖಂಡರಾದ ಆರ್.ಎಸ್.ಶ್ರೀನಿವಾಸ್, ಸಿ.ಸುರೇಶ್, ವೇಣು, ಕೆರಮಲ ಬದ್ರಿ, ಎಂ.ಮುನಿರಾಜು, ಎಂ.ಚೌಡಯ್ಯ, ಸಿ.ಅಶ್ವತ್, ಜನಪರ ಮಂಜು, ನಾಗೇಶ್, ಎಲ್.ಶಿವಕುಮಾರ್, ರಾಜಶೇಖರ್, ಆನಂದ್, ತ್ಯಾಗರಾಜ್, ನೇಕಾರ ಸಂಘಟನೆಗಳ ಒಕ್ಕೂಟದ ಪರವಾಗಿ ಪಾಲ್ಗೊಂಡಿದ್ದರು.
ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…
ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…
ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…
ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…
ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…