ದೊಡ್ಡಬಳ್ಳಾಪುರ ತಾಲೂಕು ಕರ್ನಾಟಕ ರಾಜ್ಯ ನೇಕಾರರ ಸಂಘಟನೆಗಳ ಒಕ್ಕೂಟ, ಮಾಜಿ ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದ ತಂಡ ಜವಳಿ, ಕಬ್ಬು ಮತ್ತು ಸಕ್ಕರೆ ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ.ಎಸ್ ಪಾಟೀಲ ಅವರನ್ನು
ಭೇಟಿ ಮಾಡಿ ರಾಜ್ಯ ನೇಕಾರರ ಸಮಸ್ಯೆಗಳ ಬಗ್ಗೆ ವಿವರಿಸಿ ಹಲವಾರು ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಿದ್ದಾರೆ.
ಮುಖ್ಯವಾಗಿ ವಿದ್ಯುತ್ ಬೆಲೆ ಏರಿಕೆ ದುಬಾರಿಯಾಗಿದ್ದು ತಕ್ಷಣ ಹಿಂಪಡೆಯಬೇಕು ಹಾಗೂ ನೇಕಾರರು ಮಗ್ಗಗಳಿಗೆ 20 ಎಚ್ಪಿ ವರೆಗಿನ ವಿದ್ಯುತ್ ಉಚಿತವಾಗಿ ನೀಡಬೇಕು, ಕರ್ನಾಟಕ ರಾಜ್ಯ ನೇಕಾರರ ಹಿತರಕ್ಷಣಾ ಸಮಿತಿಯ ನೇತೃತ್ವದಲ್ಲಿ ನೇಕಾರರಿಗೆ ಗುರುತಿನ ಚೀಟಿಯನ್ನು ನೀಡಲು ದೊಡ್ಡಬಳ್ಳಾಪುರದಲ್ಲಿ ಬೃಹತ್ ಹೋರಾಟ ನಡೆಸಿ ಒತ್ತಾಯಿಸಲಾಗಿತ್ತು, ಹೋರಾಟದ ಫಲವಾಗಿ ಈಗ ರಾಜ್ಯದಲ್ಲಿ ಸೆನ್ಸಸ್ ಕಾರ್ಯ ಮುಗಿದಿದ್ದು ಇಡೀ ರಾಜ್ಯದ ನೇಕಾರರಿಗೆ ತಕ್ಷಣ ನೇಕಾರ ಗುರುತಿನ ಚೀಟಿಯನ್ನು ನೀಡಬೇಕು, ನೇಕಾರರ ಕಲ್ಯಾಣ ಮಂಡಳಿಯನ್ನು ರಚಿಸಿ ರಾಜ್ಯದ ಕಟ್ಟಡ ಕಾರ್ಮಿಕರಿಗೆ ನೀಡುತ್ತಿರುವ ರೀತಿಯಲ್ಲಿ ಇ.ಎಸ್.ಐ ಸೇರಿದಂತೆ 20 ಸೌಲಭ್ಯಗಳನ್ನು ನೇಕಾರರಿಗೂ ನೀಡಬೇಕು ಮತ್ತು ಈ ಕಲ್ಯಾಣ ಮಂಡಳಿಗೆ ಒಂದು ಸಾವಿರ ಕೋಟಿಯ ಆವರ್ತ ನಿಧಿಯನ್ನು ಮೀಸಲಿಡಬೇಕು. ನೇಕಾರರು ಸ್ವಯಂ ಉದ್ಯೋಗಕ್ಕೆ ಖರೀದಿಸುವ ಮಗ್ಗಗಳಿಗೆ ಮತ್ತು ಜಾಕಾರ್ಡುಗಳಿಗೆ ಶೇ.75ರಷ್ಟು ಸಹಾಯಧನ ನೀಡಬೇಕು. ವಿದ್ಯುತ್ ಕ್ಷೇತ್ರದ ಖಾಸಗೀಕರಣವನ್ನು ತಡೆಯಬೇಕು ಎಂದು ಆಗ್ರಹಿಸಿದರು.
ಸಚಿವ ಶಿವಾನಂದ ಪಾಟೀಲ್ ಅವರು ಮಾತನಾಡಿ, ನಿಮ್ಮ ಎಲ್ಲಾ ಬೇಡಿಕೆಗಳ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತಂದು ತಕ್ಷಣಕ್ಕೆ ಮಾಡಬಹುದಾದ ಮತ್ತು ದೀರ್ಘಾವಧಿಯಲ್ಲಿ ಮಾಡಬಹುದಾದ ಯೋಜನೆಗಳ ಬಗ್ಗೆ ಚರ್ಚಿಸಲಾಗುವುದು ಮತ್ತು ಸಾಧ್ಯವಾದಷ್ಟು ಬೇಗ ಅನುಷ್ಠಾನಕ್ಕೆ ಬರುವಂತೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಈ ವೇಳೆ ಮುಖಂಡರಾದ ಆರ್.ಎಸ್.ಶ್ರೀನಿವಾಸ್, ಸಿ.ಸುರೇಶ್, ವೇಣು, ಕೆರಮಲ ಬದ್ರಿ, ಎಂ.ಮುನಿರಾಜು, ಎಂ.ಚೌಡಯ್ಯ, ಸಿ.ಅಶ್ವತ್, ಜನಪರ ಮಂಜು, ನಾಗೇಶ್, ಎಲ್.ಶಿವಕುಮಾರ್, ರಾಜಶೇಖರ್, ಆನಂದ್, ತ್ಯಾಗರಾಜ್, ನೇಕಾರ ಸಂಘಟನೆಗಳ ಒಕ್ಕೂಟದ ಪರವಾಗಿ ಪಾಲ್ಗೊಂಡಿದ್ದರು.
ದೊಡ್ಡಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಜನಸಾಮಾನ್ಯರ ನೆಮ್ಮದಿ ಕದಡಿದೆ. ಮಹಿಳೆಯರ ಚಿನ್ನಾಭರಣ,…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…