ವಿದ್ಯುತ್ ದರ ಇಳಿಕೆ ಸೇರಿದಂತೆ ನೇಕಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜವಳಿ ಸಚಿವರಲ್ಲಿ ಮನವಿ

ದೊಡ್ಡಬಳ್ಳಾಪುರ ತಾಲೂಕು ಕರ್ನಾಟಕ ರಾಜ್ಯ ನೇಕಾರರ ಸಂಘಟನೆಗಳ ಒಕ್ಕೂಟ, ಮಾಜಿ ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದ ತಂಡ ಜವಳಿ, ಕಬ್ಬು ಮತ್ತು ಸಕ್ಕರೆ ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ.ಎಸ್ ಪಾಟೀಲ ಅವರನ್ನು

ಭೇಟಿ ಮಾಡಿ ರಾಜ್ಯ ನೇಕಾರರ ಸಮಸ್ಯೆಗಳ ಬಗ್ಗೆ ವಿವರಿಸಿ ಹಲವಾರು ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಿದ್ದಾರೆ.

ಮುಖ್ಯವಾಗಿ ವಿದ್ಯುತ್ ಬೆಲೆ ಏರಿಕೆ ದುಬಾರಿಯಾಗಿದ್ದು ತಕ್ಷಣ ಹಿಂಪಡೆಯಬೇಕು ಹಾಗೂ ನೇಕಾರರು ಮಗ್ಗಗಳಿಗೆ 20 ಎಚ್‌ಪಿ ವರೆಗಿನ ವಿದ್ಯುತ್ ಉಚಿತವಾಗಿ ನೀಡಬೇಕು, ಕರ್ನಾಟಕ ರಾಜ್ಯ ನೇಕಾರರ ಹಿತರಕ್ಷಣಾ ಸಮಿತಿಯ ನೇತೃತ್ವದಲ್ಲಿ ನೇಕಾರರಿಗೆ ಗುರುತಿನ ಚೀಟಿಯನ್ನು ನೀಡಲು ದೊಡ್ಡಬಳ್ಳಾಪುರದಲ್ಲಿ ಬೃಹತ್ ಹೋರಾಟ ನಡೆಸಿ ಒತ್ತಾಯಿಸಲಾಗಿತ್ತು, ಹೋರಾಟದ ಫಲವಾಗಿ ಈಗ ರಾಜ್ಯದಲ್ಲಿ ಸೆನ್ಸಸ್ ಕಾರ್ಯ ಮುಗಿದಿದ್ದು ಇಡೀ ರಾಜ್ಯದ ನೇಕಾರರಿಗೆ ತಕ್ಷಣ ನೇಕಾರ ಗುರುತಿನ ಚೀಟಿಯನ್ನು ನೀಡಬೇಕು, ನೇಕಾರರ ಕಲ್ಯಾಣ ಮಂಡಳಿಯನ್ನು ರಚಿಸಿ ರಾಜ್ಯದ ಕಟ್ಟಡ ಕಾರ್ಮಿಕರಿಗೆ ನೀಡುತ್ತಿರುವ ರೀತಿಯಲ್ಲಿ ಇ.ಎಸ್.ಐ ಸೇರಿದಂತೆ 20 ಸೌಲಭ್ಯಗಳನ್ನು ನೇಕಾರರಿಗೂ ನೀಡಬೇಕು ಮತ್ತು ಈ ಕಲ್ಯಾಣ ಮಂಡಳಿಗೆ ಒಂದು ಸಾವಿರ ಕೋಟಿಯ ಆವರ್ತ ನಿಧಿಯನ್ನು ಮೀಸಲಿಡಬೇಕು. ನೇಕಾರರು ಸ್ವಯಂ ಉದ್ಯೋಗಕ್ಕೆ ಖರೀದಿಸುವ ಮಗ್ಗಗಳಿಗೆ ಮತ್ತು ಜಾಕಾರ್ಡುಗಳಿಗೆ ಶೇ.75ರಷ್ಟು ಸಹಾಯಧನ ನೀಡಬೇಕು. ವಿದ್ಯುತ್ ಕ್ಷೇತ್ರದ ಖಾಸಗೀಕರಣವನ್ನು ತಡೆಯಬೇಕು ಎಂದು ಆಗ್ರಹಿಸಿದರು.

ಸಚಿವ ಶಿವಾನಂದ ಪಾಟೀಲ್ ಅವರು ಮಾತನಾಡಿ, ನಿಮ್ಮ ಎಲ್ಲಾ ಬೇಡಿಕೆಗಳ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತಂದು ತಕ್ಷಣಕ್ಕೆ ಮಾಡಬಹುದಾದ ಮತ್ತು ದೀರ್ಘಾವಧಿಯಲ್ಲಿ ಮಾಡಬಹುದಾದ ಯೋಜನೆಗಳ ಬಗ್ಗೆ ಚರ್ಚಿಸಲಾಗುವುದು ಮತ್ತು ಸಾಧ್ಯವಾದಷ್ಟು ಬೇಗ ಅನುಷ್ಠಾನಕ್ಕೆ ಬರುವಂತೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಈ ವೇಳೆ ಮುಖಂಡರಾದ ಆರ್.ಎಸ್.ಶ್ರೀನಿವಾಸ್, ಸಿ.ಸುರೇಶ್, ವೇಣು, ಕೆರಮಲ ಬದ್ರಿ, ಎಂ.ಮುನಿರಾಜು, ಎಂ.ಚೌಡಯ್ಯ, ಸಿ.ಅಶ್ವತ್, ಜನಪರ ಮಂಜು, ನಾಗೇಶ್, ಎಲ್.ಶಿವಕುಮಾರ್, ರಾಜಶೇಖರ್, ಆನಂದ್, ತ್ಯಾಗರಾಜ್, ನೇಕಾರ ಸಂಘಟನೆಗಳ ಒಕ್ಕೂಟದ ಪರವಾಗಿ ಪಾಲ್ಗೊಂಡಿದ್ದರು.

Ramesh Babu

Journalist

Recent Posts

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

6 hours ago

ಎಲ್-ನಿನೋ ಪರಿಣಾಮ, ಮಳೆಯ ಕೊರತೆ, ತಾಪಮಾನದ ಏರಿಕೆ, ಒಣ ಹವಾಮಾನ ಹೆಚ್ಚಳ ಸಾಧ್ಯತೆ: ತೋಟಗಾರಿಕಾ ಬೆಳೆಗಳ ರಕ್ಷಣೆಗೆ ಇರಲಿ ಆದ್ಯತೆ

ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…

6 hours ago

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

18 hours ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

21 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

2 days ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

2 days ago