ದೊಡ್ಡಬಳ್ಳಾಪುರ ತಾಲೂಕು ಕರ್ನಾಟಕ ರಾಜ್ಯ ನೇಕಾರರ ಸಂಘಟನೆಗಳ ಒಕ್ಕೂಟ, ಮಾಜಿ ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದ ತಂಡ ಜವಳಿ, ಕಬ್ಬು ಮತ್ತು ಸಕ್ಕರೆ ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ.ಎಸ್ ಪಾಟೀಲ ಅವರನ್ನು
ಭೇಟಿ ಮಾಡಿ ರಾಜ್ಯ ನೇಕಾರರ ಸಮಸ್ಯೆಗಳ ಬಗ್ಗೆ ವಿವರಿಸಿ ಹಲವಾರು ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಿದ್ದಾರೆ.
ಮುಖ್ಯವಾಗಿ ವಿದ್ಯುತ್ ಬೆಲೆ ಏರಿಕೆ ದುಬಾರಿಯಾಗಿದ್ದು ತಕ್ಷಣ ಹಿಂಪಡೆಯಬೇಕು ಹಾಗೂ ನೇಕಾರರು ಮಗ್ಗಗಳಿಗೆ 20 ಎಚ್ಪಿ ವರೆಗಿನ ವಿದ್ಯುತ್ ಉಚಿತವಾಗಿ ನೀಡಬೇಕು, ಕರ್ನಾಟಕ ರಾಜ್ಯ ನೇಕಾರರ ಹಿತರಕ್ಷಣಾ ಸಮಿತಿಯ ನೇತೃತ್ವದಲ್ಲಿ ನೇಕಾರರಿಗೆ ಗುರುತಿನ ಚೀಟಿಯನ್ನು ನೀಡಲು ದೊಡ್ಡಬಳ್ಳಾಪುರದಲ್ಲಿ ಬೃಹತ್ ಹೋರಾಟ ನಡೆಸಿ ಒತ್ತಾಯಿಸಲಾಗಿತ್ತು, ಹೋರಾಟದ ಫಲವಾಗಿ ಈಗ ರಾಜ್ಯದಲ್ಲಿ ಸೆನ್ಸಸ್ ಕಾರ್ಯ ಮುಗಿದಿದ್ದು ಇಡೀ ರಾಜ್ಯದ ನೇಕಾರರಿಗೆ ತಕ್ಷಣ ನೇಕಾರ ಗುರುತಿನ ಚೀಟಿಯನ್ನು ನೀಡಬೇಕು, ನೇಕಾರರ ಕಲ್ಯಾಣ ಮಂಡಳಿಯನ್ನು ರಚಿಸಿ ರಾಜ್ಯದ ಕಟ್ಟಡ ಕಾರ್ಮಿಕರಿಗೆ ನೀಡುತ್ತಿರುವ ರೀತಿಯಲ್ಲಿ ಇ.ಎಸ್.ಐ ಸೇರಿದಂತೆ 20 ಸೌಲಭ್ಯಗಳನ್ನು ನೇಕಾರರಿಗೂ ನೀಡಬೇಕು ಮತ್ತು ಈ ಕಲ್ಯಾಣ ಮಂಡಳಿಗೆ ಒಂದು ಸಾವಿರ ಕೋಟಿಯ ಆವರ್ತ ನಿಧಿಯನ್ನು ಮೀಸಲಿಡಬೇಕು. ನೇಕಾರರು ಸ್ವಯಂ ಉದ್ಯೋಗಕ್ಕೆ ಖರೀದಿಸುವ ಮಗ್ಗಗಳಿಗೆ ಮತ್ತು ಜಾಕಾರ್ಡುಗಳಿಗೆ ಶೇ.75ರಷ್ಟು ಸಹಾಯಧನ ನೀಡಬೇಕು. ವಿದ್ಯುತ್ ಕ್ಷೇತ್ರದ ಖಾಸಗೀಕರಣವನ್ನು ತಡೆಯಬೇಕು ಎಂದು ಆಗ್ರಹಿಸಿದರು.
ಸಚಿವ ಶಿವಾನಂದ ಪಾಟೀಲ್ ಅವರು ಮಾತನಾಡಿ, ನಿಮ್ಮ ಎಲ್ಲಾ ಬೇಡಿಕೆಗಳ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತಂದು ತಕ್ಷಣಕ್ಕೆ ಮಾಡಬಹುದಾದ ಮತ್ತು ದೀರ್ಘಾವಧಿಯಲ್ಲಿ ಮಾಡಬಹುದಾದ ಯೋಜನೆಗಳ ಬಗ್ಗೆ ಚರ್ಚಿಸಲಾಗುವುದು ಮತ್ತು ಸಾಧ್ಯವಾದಷ್ಟು ಬೇಗ ಅನುಷ್ಠಾನಕ್ಕೆ ಬರುವಂತೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಈ ವೇಳೆ ಮುಖಂಡರಾದ ಆರ್.ಎಸ್.ಶ್ರೀನಿವಾಸ್, ಸಿ.ಸುರೇಶ್, ವೇಣು, ಕೆರಮಲ ಬದ್ರಿ, ಎಂ.ಮುನಿರಾಜು, ಎಂ.ಚೌಡಯ್ಯ, ಸಿ.ಅಶ್ವತ್, ಜನಪರ ಮಂಜು, ನಾಗೇಶ್, ಎಲ್.ಶಿವಕುಮಾರ್, ರಾಜಶೇಖರ್, ಆನಂದ್, ತ್ಯಾಗರಾಜ್, ನೇಕಾರ ಸಂಘಟನೆಗಳ ಒಕ್ಕೂಟದ ಪರವಾಗಿ ಪಾಲ್ಗೊಂಡಿದ್ದರು.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…