ವಿದ್ಯುತ್ ಚಾಲಿತ ನೇಕಾರ ಕೂಲಿ ಕಾರ್ಮಿಕರ ಸಂಘ ಹಾಗೂ ಇತರೆ ಸಂಘ ಸಂಸ್ಥೆಗಳ ವತಿಯಿಂದ ವಿದ್ಯುತ್ ದರ ಏರಿಕೆ ಖಂಡಿಸಿ ನಗರದ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ ಬಳಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
*ನೇಕಾರಿಕೆ ಉದ್ಯೋಗಕ್ಕಾಗಿ ಸರ್ಕಾರ ರೂಪಿಸಿರುವ ವಿಶೇಷ ಯೋಜನೆಯ ಒಂದು ರೂಪಾಯಿ 25ಪೈಸಾ ದರದಲ್ಲಿ ವಿದ್ಯುತ್ ಬಿಲ್ ಬರಬೇಕು
*ನೇಕಾರಿಕೆ ಮೀಟರ್ ಮಿನಿಮಮ್ ಚಾರ್ಜ್ ಎಚ್.ಪಿ ಒಂದಕ್ಕೆ 80 ರಿಂದ 140 ಏರಿಸಿರುವ ಹಾಗೂ ಎಫ್.ಎಸಿ ಶುಲ್ಕ ತಕ್ಷಣ ರದ್ದುಗೊಳಿಸಬೇಕು
* ಹೊಂದಾಣಿಕೆ ಶುಲ್ಕ ಹಾಗೂ ಇತರೆ ಶುಲ್ಕಗಳನ್ನು ತಕ್ಷಣ ರದ್ದುಗೊಳಿಸಬೇಕು
*ಕೆಟ್ಟು ಹೋಗಿರುವ ಮೀಟರ್ ಗಳನ್ನು ಯಾವುದೇ ಶುಲ್ಕ ತೆಗೆದುಕೊಳ್ಳದೆ ತಕ್ಷಣ ಬದಲಾವಣೆ ಮಾಡಿಕೊಡಬೇಕು.
*ಹೆಚ್ಚಾಗಿರುವ ಹೆಚ್.ಪಿಯನ್ನು ಕಡಿಮೆ ಮಾಡಿಕೊಳ್ಳಲು ಯಾವುದೇ ಶುಲ್ಕ ಪಡೆಯಬಾರದು
*ಆರ್ ಆರ್ ಸಂಖ್ಯೆಯಲ್ಲಿ ನಮೂದಾಗಿರುವ ವ್ಯಕ್ತಿಯೂ ಮರಣಹೊಂದಿದ್ದಲ್ಲಿ ಅವರ ಹೆಸರನ್ನು ತೆಗೆದು ಕುಟುಂಬದ ಸದಸ್ಯರಿಗೆ ವರ್ಗಾವಣೆ ಮಾಡಬೇಕು
* ನೇಕಾರಿಕೆ ಬಿಲ್ ಗಳನ್ನು ಬಿಲ್ ಬಂದ ದಿನದಿಂದ30 ದಿನಗಳ ಗಡುವು ಕೊಡಬೇಕು
* ಗೃಹಬಳಕೆ ವಿದ್ಯುತ್ ಸ್ಲಾಬ್ 50 ಯೂನಿಟ್ ಗಳಿಂದ ಪ್ರಾರಂಭಿಸಬೇಕು ಎಂಬ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟು ಪ್ರತಿಭಟನೆ ನಡೆಸಲಾಯಿತು.
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…