ವಿದ್ಯುತ್ ಚಾಲಿತ ನೇಕಾರ ಕೂಲಿ ಕಾರ್ಮಿಕರ ಸಂಘ ಹಾಗೂ ಇತರೆ ಸಂಘ ಸಂಸ್ಥೆಗಳ ವತಿಯಿಂದ ವಿದ್ಯುತ್ ದರ ಏರಿಕೆ ಖಂಡಿಸಿ ನಗರದ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ ಬಳಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
*ನೇಕಾರಿಕೆ ಉದ್ಯೋಗಕ್ಕಾಗಿ ಸರ್ಕಾರ ರೂಪಿಸಿರುವ ವಿಶೇಷ ಯೋಜನೆಯ ಒಂದು ರೂಪಾಯಿ 25ಪೈಸಾ ದರದಲ್ಲಿ ವಿದ್ಯುತ್ ಬಿಲ್ ಬರಬೇಕು
*ನೇಕಾರಿಕೆ ಮೀಟರ್ ಮಿನಿಮಮ್ ಚಾರ್ಜ್ ಎಚ್.ಪಿ ಒಂದಕ್ಕೆ 80 ರಿಂದ 140 ಏರಿಸಿರುವ ಹಾಗೂ ಎಫ್.ಎಸಿ ಶುಲ್ಕ ತಕ್ಷಣ ರದ್ದುಗೊಳಿಸಬೇಕು
* ಹೊಂದಾಣಿಕೆ ಶುಲ್ಕ ಹಾಗೂ ಇತರೆ ಶುಲ್ಕಗಳನ್ನು ತಕ್ಷಣ ರದ್ದುಗೊಳಿಸಬೇಕು
*ಕೆಟ್ಟು ಹೋಗಿರುವ ಮೀಟರ್ ಗಳನ್ನು ಯಾವುದೇ ಶುಲ್ಕ ತೆಗೆದುಕೊಳ್ಳದೆ ತಕ್ಷಣ ಬದಲಾವಣೆ ಮಾಡಿಕೊಡಬೇಕು.
*ಹೆಚ್ಚಾಗಿರುವ ಹೆಚ್.ಪಿಯನ್ನು ಕಡಿಮೆ ಮಾಡಿಕೊಳ್ಳಲು ಯಾವುದೇ ಶುಲ್ಕ ಪಡೆಯಬಾರದು
*ಆರ್ ಆರ್ ಸಂಖ್ಯೆಯಲ್ಲಿ ನಮೂದಾಗಿರುವ ವ್ಯಕ್ತಿಯೂ ಮರಣಹೊಂದಿದ್ದಲ್ಲಿ ಅವರ ಹೆಸರನ್ನು ತೆಗೆದು ಕುಟುಂಬದ ಸದಸ್ಯರಿಗೆ ವರ್ಗಾವಣೆ ಮಾಡಬೇಕು
* ನೇಕಾರಿಕೆ ಬಿಲ್ ಗಳನ್ನು ಬಿಲ್ ಬಂದ ದಿನದಿಂದ30 ದಿನಗಳ ಗಡುವು ಕೊಡಬೇಕು
* ಗೃಹಬಳಕೆ ವಿದ್ಯುತ್ ಸ್ಲಾಬ್ 50 ಯೂನಿಟ್ ಗಳಿಂದ ಪ್ರಾರಂಭಿಸಬೇಕು ಎಂಬ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟು ಪ್ರತಿಭಟನೆ ನಡೆಸಲಾಯಿತು.
ರಾಜಕೀಯ ಪಕ್ಷಗಳ ಭಿನ್ನಮತದ ಸುತ್ತ, ಅಧಿಕಾರ ಕುರ್ಚಿಯ ಹಾವು ಏಣಿ ಆಟದ ಸುತ್ತ, ಸ್ವಾಮೀಜಿಗಳ ಪೀಠದ ಸುತ್ತ, ಧರ್ಮಸ್ಥಳದ ನಿಗೂಢ…
ನಾಳೆ (ಜು.29) ರಂದು ದೊಡ್ಡಬಳ್ಳಾಪುರ ತಾಲೂಕಿನ ಪವಿತ್ರ ಹಾಗೂ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು…
ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ…
ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದ ಗ್ರಾಮ…
ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ…
ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…