ವಿದ್ಯುತ್ ದರ ಏರಿಕೆ ಖಂಡಿಸಿ ಬೃಹತ್ ಪ್ರತಿಭಟನೆ

ವಿದ್ಯುತ್ ಚಾಲಿತ ನೇಕಾರ ಕೂಲಿ ಕಾರ್ಮಿಕರ ಸಂಘ ಹಾಗೂ ಇತರೆ ಸಂಘ‌ ಸಂಸ್ಥೆಗಳ ವತಿಯಿಂದ ವಿದ್ಯುತ್ ದರ ಏರಿಕೆ ಖಂಡಿಸಿ ನಗರದ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ ಬಳಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾಕಾರರ ಬೇಡಿಕೆ

*ನೇಕಾರಿಕೆ ಉದ್ಯೋಗಕ್ಕಾಗಿ ಸರ್ಕಾರ ರೂಪಿಸಿರುವ ವಿಶೇಷ ಯೋಜನೆಯ ಒಂದು ರೂಪಾಯಿ 25ಪೈಸಾ ದರದಲ್ಲಿ ವಿದ್ಯುತ್ ಬಿಲ್ ಬರಬೇಕು

*ನೇಕಾರಿಕೆ ಮೀಟರ್ ಮಿನಿಮಮ್ ಚಾರ್ಜ್ ಎಚ್.ಪಿ‌ ಒಂದಕ್ಕೆ 80 ರಿಂದ 140 ಏರಿಸಿರುವ ಹಾಗೂ ಎಫ್.ಎಸಿ ಶುಲ್ಕ ತಕ್ಷಣ ರದ್ದುಗೊಳಿಸಬೇಕು

* ಹೊಂದಾಣಿಕೆ ಶುಲ್ಕ ಹಾಗೂ ಇತರೆ ಶುಲ್ಕಗಳನ್ನು ತಕ್ಷಣ ರದ್ದುಗೊಳಿಸಬೇಕು

*ಕೆಟ್ಟು ಹೋಗಿರುವ ಮೀಟರ್ ಗಳನ್ನು ಯಾವುದೇ ಶುಲ್ಕ ತೆಗೆದುಕೊಳ್ಳದೆ ತಕ್ಷಣ ಬದಲಾವಣೆ ಮಾಡಿಕೊಡಬೇಕು.

*ಹೆಚ್ಚಾಗಿರುವ ಹೆಚ್.ಪಿಯನ್ನು ಕಡಿಮೆ ಮಾಡಿಕೊಳ್ಳಲು ಯಾವುದೇ ಶುಲ್ಕ ಪಡೆಯಬಾರದು

*ಆರ್ ಆರ್ ಸಂಖ್ಯೆಯಲ್ಲಿ ನಮೂದಾಗಿರುವ ವ್ಯಕ್ತಿಯೂ ಮರಣಹೊಂದಿದ್ದಲ್ಲಿ ಅವರ ಹೆಸರನ್ನು ತೆಗೆದು ಕುಟುಂಬದ ಸದಸ್ಯರಿಗೆ ವರ್ಗಾವಣೆ ಮಾಡಬೇಕು

* ನೇಕಾರಿಕೆ ಬಿಲ್ ಗಳನ್ನು ಬಿಲ್ ಬಂದ ದಿನದಿಂದ30 ದಿನಗಳ ಗಡುವು ಕೊಡಬೇಕು

* ಗೃಹಬಳಕೆ ವಿದ್ಯುತ್ ಸ್ಲಾಬ್ 50 ಯೂನಿಟ್ ಗಳಿಂದ ಪ್ರಾರಂಭಿಸಬೇಕು ಎಂಬ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟು ಪ್ರತಿಭಟನೆ ನಡೆಸಲಾಯಿತು.

Ramesh Babu

Journalist

Recent Posts

ಸಾರ್ವಜನಿಕ ಆಡಳಿತದ ದಕ್ಷತೆ ಹೆಚ್ಚಿಸಲು ಕೆಜಿಐಎಸ್-2.0 ಸಹಕಾರಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧಾ

ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…

2 hours ago

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

7 hours ago

ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ….

ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…

10 hours ago

ಹವಾಮಾನ ವೈಪರಿತ್ಯಕ್ಕೆ ತತ್ತರಿಸಿದ ಕೃಷಿ: ಮಾವು, ದ್ರಾಕ್ಷಿ, ತರಕಾರಿ ಬೆಳೆಗಳಿಗೆ ಭಾರೀ ಹೊಡೆತ

ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…

12 hours ago

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

23 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

1 day ago