ಬೆಂಗಳೂರು, ವೈಟ್ಫೀಲ್ಡ್: ಮೂರು ತಿಂಗಳ ಹಿಂದೆ ಸಂಭವಿಸಿದ ಭೀಕರ ವಿದ್ಯುತ್ ಅಪಘಾತದಿಂದ ತೀವ್ರವಾಗಿ ಗಾಯಗೊಂಡ 17 ವರ್ಷದ ಪಶ್ಚಿಮ ಬಂಗಾಳ ಮೂಲದ ಯುವಕನಿಗೆ, ಮೆದುಳಿಗೆ ಫಂಗಸ್ ಹಿಡಿದಷ್ಟು ಗಂಭೀರ ಸ್ಥಿತಿಯಲ್ಲಿದ್ದರೂ, ಮೆಡಿಕವರ್ ಆಸ್ಪತ್ರೆಯ ನ್ಯೂರೋ ಸರ್ಜನ್ ಡಾ. ದೀಪಕ್ ಅವರ ಶಸ್ತ್ರಚಿಕಿತ್ಸೆಯಿಂದ ಹೊಸ ಬದುಕು ದೊರೆತಿದೆ.
ಆಘಾತದ ಪರಿಣಾಮವಾಗಿ ಯುವಕನ ಬಲ ಪಾರಿಯೆಟಲ್ ಭಾಗದ ತ್ವಚೆ ಮತ್ತು ಮೂಳೆ ಸಂಪೂರ್ಣವಾಗಿ ಹಾನಿಯಾಗಿದ್ದು, ಮೆದುಳಿನ ಭಾಗವೇ ಹೊರಬಿದ್ದಂತಹ ಪರಿಸ್ಥಿತಿ ಉಂಟಾಗಿತ್ತು. ಅಲ್ಲದೇ, ಆ ಭಾಗದಲ್ಲಿ ಸೋಂಕು ಹರಡಿದ ಪರಿಣಾಮ ಫಂಗಲ್ ಇನ್ಫೆಕ್ಷನ್ ಕೂಡ ಅಭಿವೃದ್ಧಿಯಾಗಿತ್ತು.
ಪಶ್ಚಿಮ ಬಂಗಾಳದಲ್ಲಿ ಆರಂಭಿಕ ಚಿಕಿತ್ಸೆ ಪಡೆದರೂ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ. ನಂತರ ಯುವಕನನ್ನು ಬೆಂಗಳೂರಿನ ವೈಟ್ಫೀಲ್ಡ್ನ ಮೆಡಿಕವರ್ ಆಸ್ಪತ್ರೆಗೆ ತರಲಾಗಿದ್ದು, ನ್ಯೂರೋ ಸರ್ಜನ್ ಡಾ. ದೀಪಕ್ ಅವರ ಸಲಹೆಯ ಮೇರೆಗೆ ತಕ್ಷಣವೇ ಶಸ್ತ್ರಚಿಕಿತ್ಸೆ ಕೈಗೊಳ್ಳಲಾಯಿತು.
ಆಗಮಿಸಿದಾಗ ಯುವಕನ ದೇಹದ ಎಡಭಾಗ ಸಂಪೂರ್ಣವಾಗಿ ದುರ್ಬಲವಾಗಿತ್ತು. ಡಾ. ದೀಪಕ್ ಅವರು ಮೆದುಳಿನ ಗಾಯದ ಭಾಗವನ್ನು ಕ್ಲೀನಿಂಗ್ ಮಾಡಿ, ಮೆದುಳಿನ ಮತ್ತು ಫ್ಲ್ಯಾಪ್ ಪುನರ್ ನಿರ್ಮಾಣ ಶಸ್ತ್ರಚಿಕಿತ್ಸೆ ನಡೆಸಲಾಯ್ತು. ಇದು ಅಪರೂಪದ ಹಾಗೂ ಅಪಾಯಕಾರಿಯಾದ ಶಸ್ತ್ರಚಿಕಿತ್ಸೆಯಾಗಿದ್ದು, ಅದನ್ನು ಯಶಸ್ವಿಯಾಗಿ ನೆರವೇರಿಸಿದರು.ಇಂದು ಯುವಕ ಸಂಪೂರ್ಣ ಗುಣಮುಖನಾಗಿ ತಾನು ಮನೆಗೆ ಮರಳಿದ್ದಾನೆ.
“ಇದು ಕೇವಲ ಶಸ್ತ್ರಚಿಕಿತ್ಸೆಯಲ್ಲ, ಜೀವದ ಮೇಲಿನ ವಿಜಯದ ಕಥೆಯಾಗಿದೆ. ಇಂತಹ ಪ್ರಕರಣಗಳು ನಮ್ಮ ಕರ್ತವ್ಯ ಮತ್ತು ಸಾಮರ್ಥ್ಯವನ್ನು ಸದಾ ನೆನಪಿಸುತ್ತವೆ,” ಎಂದು ಡಾ. ದೀಪಕ್ ಸಂತಸ ವ್ಯಕ್ತಪಡಿಸಿದರು.
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…