ವಿದ್ಯುತ್ ದುರಂತದಲ್ಲಿ ತೀವ್ರ ಮೆದುಳು ಗಾಯಗೊಂಡ ಯುವಕನಿಗೆ ಮರು ಜೀವ ನೀಡಿದ ವೈದ್ಯ

ಬೆಂಗಳೂರು, ವೈಟ್‌ಫೀಲ್ಡ್: ಮೂರು ತಿಂಗಳ ಹಿಂದೆ ಸಂಭವಿಸಿದ ಭೀಕರ ವಿದ್ಯುತ್ ಅಪಘಾತದಿಂದ ತೀವ್ರವಾಗಿ ಗಾಯಗೊಂಡ 17 ವರ್ಷದ ಪಶ್ಚಿಮ ಬಂಗಾಳ ಮೂಲದ ಯುವಕನಿಗೆ, ಮೆದುಳಿಗೆ ಫಂಗಸ್ ಹಿಡಿದಷ್ಟು ಗಂಭೀರ ಸ್ಥಿತಿಯಲ್ಲಿದ್ದರೂ, ಮೆಡಿಕವರ್ ಆಸ್ಪತ್ರೆಯ ನ್ಯೂರೋ ಸರ್ಜನ್ ಡಾ. ದೀಪಕ್ ಅವರ ಶಸ್ತ್ರಚಿಕಿತ್ಸೆಯಿಂದ ಹೊಸ ಬದುಕು ದೊರೆತಿದೆ.

ಆಘಾತದ ಪರಿಣಾಮವಾಗಿ ಯುವಕನ ಬಲ ಪಾರಿಯೆಟಲ್ ಭಾಗದ ತ್ವಚೆ ಮತ್ತು ಮೂಳೆ ಸಂಪೂರ್ಣವಾಗಿ ಹಾನಿಯಾಗಿದ್ದು, ಮೆದುಳಿನ ಭಾಗವೇ ಹೊರಬಿದ್ದಂತಹ ಪರಿಸ್ಥಿತಿ ಉಂಟಾಗಿತ್ತು. ಅಲ್ಲದೇ, ಆ ಭಾಗದಲ್ಲಿ ಸೋಂಕು ಹರಡಿದ ಪರಿಣಾಮ ಫಂಗಲ್ ಇನ್ಫೆಕ್ಷನ್ ಕೂಡ ಅಭಿವೃದ್ಧಿಯಾಗಿತ್ತು.

ಪಶ್ಚಿಮ ಬಂಗಾಳದಲ್ಲಿ ಆರಂಭಿಕ ಚಿಕಿತ್ಸೆ ಪಡೆದರೂ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ. ನಂತರ ಯುವಕನನ್ನು ಬೆಂಗಳೂರಿನ ವೈಟ್‌ಫೀಲ್ಡ್‌ನ ಮೆಡಿಕವರ್ ಆಸ್ಪತ್ರೆಗೆ ತರಲಾಗಿದ್ದು, ನ್ಯೂರೋ ಸರ್ಜನ್ ಡಾ. ದೀಪಕ್ ಅವರ ಸಲಹೆಯ ಮೇರೆಗೆ ತಕ್ಷಣವೇ ಶಸ್ತ್ರಚಿಕಿತ್ಸೆ ಕೈಗೊಳ್ಳಲಾಯಿತು.

ಆಗಮಿಸಿದಾಗ ಯುವಕನ ದೇಹದ ಎಡಭಾಗ ಸಂಪೂರ್ಣವಾಗಿ ದುರ್ಬಲವಾಗಿತ್ತು. ಡಾ. ದೀಪಕ್ ಅವರು ಮೆದುಳಿನ ಗಾಯದ ಭಾಗವನ್ನು ಕ್ಲೀನಿಂಗ್ ಮಾಡಿ, ಮೆದುಳಿನ ಮತ್ತು ಫ್ಲ್ಯಾಪ್ ಪುನರ್ ನಿರ್ಮಾಣ ಶಸ್ತ್ರಚಿಕಿತ್ಸೆ ನಡೆಸಲಾಯ್ತು. ಇದು ಅಪರೂಪದ ಹಾಗೂ ಅಪಾಯಕಾರಿಯಾದ ಶಸ್ತ್ರಚಿಕಿತ್ಸೆಯಾಗಿದ್ದು, ಅದನ್ನು ಯಶಸ್ವಿಯಾಗಿ ನೆರವೇರಿಸಿದರು.ಇಂದು ಯುವಕ ಸಂಪೂರ್ಣ ಗುಣಮುಖನಾಗಿ ತಾನು ಮನೆಗೆ ಮರಳಿದ್ದಾನೆ.

“ಇದು ಕೇವಲ ಶಸ್ತ್ರಚಿಕಿತ್ಸೆಯಲ್ಲ, ಜೀವದ ಮೇಲಿನ ವಿಜಯದ ಕಥೆಯಾಗಿದೆ. ಇಂತಹ ಪ್ರಕರಣಗಳು ನಮ್ಮ ಕರ್ತವ್ಯ ಮತ್ತು ಸಾಮರ್ಥ್ಯವನ್ನು ಸದಾ ನೆನಪಿಸುತ್ತವೆ,” ಎಂದು ಡಾ. ದೀಪಕ್ ಸಂತಸ ವ್ಯಕ್ತಪಡಿಸಿದರು.

Ramesh Babu

Journalist

Recent Posts

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

3 hours ago

ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಿ ಮಾನವೀಯತೆ ಮೆರೆದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…

5 hours ago

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

6 hours ago

ಬೆಂ ಗ್ರಾ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ತಡೆ: ಜಿಲ್ಲಾಧಿಕಾರಿ ಡಾ. ಅನುರಾಧ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…

7 hours ago

ಸಾರ್ವಜನಿಕ ಆಡಳಿತದ ದಕ್ಷತೆ ಹೆಚ್ಚಿಸಲು ಕೆಜಿಐಎಸ್-2.0 ಸಹಕಾರಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧಾ

ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…

8 hours ago

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

14 hours ago