ಬೆಂಗಳೂರು, ವೈಟ್ಫೀಲ್ಡ್: ಮೂರು ತಿಂಗಳ ಹಿಂದೆ ಸಂಭವಿಸಿದ ಭೀಕರ ವಿದ್ಯುತ್ ಅಪಘಾತದಿಂದ ತೀವ್ರವಾಗಿ ಗಾಯಗೊಂಡ 17 ವರ್ಷದ ಪಶ್ಚಿಮ ಬಂಗಾಳ ಮೂಲದ ಯುವಕನಿಗೆ, ಮೆದುಳಿಗೆ ಫಂಗಸ್ ಹಿಡಿದಷ್ಟು ಗಂಭೀರ ಸ್ಥಿತಿಯಲ್ಲಿದ್ದರೂ, ಮೆಡಿಕವರ್ ಆಸ್ಪತ್ರೆಯ ನ್ಯೂರೋ ಸರ್ಜನ್ ಡಾ. ದೀಪಕ್ ಅವರ ಶಸ್ತ್ರಚಿಕಿತ್ಸೆಯಿಂದ ಹೊಸ ಬದುಕು ದೊರೆತಿದೆ.
ಆಘಾತದ ಪರಿಣಾಮವಾಗಿ ಯುವಕನ ಬಲ ಪಾರಿಯೆಟಲ್ ಭಾಗದ ತ್ವಚೆ ಮತ್ತು ಮೂಳೆ ಸಂಪೂರ್ಣವಾಗಿ ಹಾನಿಯಾಗಿದ್ದು, ಮೆದುಳಿನ ಭಾಗವೇ ಹೊರಬಿದ್ದಂತಹ ಪರಿಸ್ಥಿತಿ ಉಂಟಾಗಿತ್ತು. ಅಲ್ಲದೇ, ಆ ಭಾಗದಲ್ಲಿ ಸೋಂಕು ಹರಡಿದ ಪರಿಣಾಮ ಫಂಗಲ್ ಇನ್ಫೆಕ್ಷನ್ ಕೂಡ ಅಭಿವೃದ್ಧಿಯಾಗಿತ್ತು.
ಪಶ್ಚಿಮ ಬಂಗಾಳದಲ್ಲಿ ಆರಂಭಿಕ ಚಿಕಿತ್ಸೆ ಪಡೆದರೂ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ. ನಂತರ ಯುವಕನನ್ನು ಬೆಂಗಳೂರಿನ ವೈಟ್ಫೀಲ್ಡ್ನ ಮೆಡಿಕವರ್ ಆಸ್ಪತ್ರೆಗೆ ತರಲಾಗಿದ್ದು, ನ್ಯೂರೋ ಸರ್ಜನ್ ಡಾ. ದೀಪಕ್ ಅವರ ಸಲಹೆಯ ಮೇರೆಗೆ ತಕ್ಷಣವೇ ಶಸ್ತ್ರಚಿಕಿತ್ಸೆ ಕೈಗೊಳ್ಳಲಾಯಿತು.
ಆಗಮಿಸಿದಾಗ ಯುವಕನ ದೇಹದ ಎಡಭಾಗ ಸಂಪೂರ್ಣವಾಗಿ ದುರ್ಬಲವಾಗಿತ್ತು. ಡಾ. ದೀಪಕ್ ಅವರು ಮೆದುಳಿನ ಗಾಯದ ಭಾಗವನ್ನು ಕ್ಲೀನಿಂಗ್ ಮಾಡಿ, ಮೆದುಳಿನ ಮತ್ತು ಫ್ಲ್ಯಾಪ್ ಪುನರ್ ನಿರ್ಮಾಣ ಶಸ್ತ್ರಚಿಕಿತ್ಸೆ ನಡೆಸಲಾಯ್ತು. ಇದು ಅಪರೂಪದ ಹಾಗೂ ಅಪಾಯಕಾರಿಯಾದ ಶಸ್ತ್ರಚಿಕಿತ್ಸೆಯಾಗಿದ್ದು, ಅದನ್ನು ಯಶಸ್ವಿಯಾಗಿ ನೆರವೇರಿಸಿದರು.ಇಂದು ಯುವಕ ಸಂಪೂರ್ಣ ಗುಣಮುಖನಾಗಿ ತಾನು ಮನೆಗೆ ಮರಳಿದ್ದಾನೆ.
“ಇದು ಕೇವಲ ಶಸ್ತ್ರಚಿಕಿತ್ಸೆಯಲ್ಲ, ಜೀವದ ಮೇಲಿನ ವಿಜಯದ ಕಥೆಯಾಗಿದೆ. ಇಂತಹ ಪ್ರಕರಣಗಳು ನಮ್ಮ ಕರ್ತವ್ಯ ಮತ್ತು ಸಾಮರ್ಥ್ಯವನ್ನು ಸದಾ ನೆನಪಿಸುತ್ತವೆ,” ಎಂದು ಡಾ. ದೀಪಕ್ ಸಂತಸ ವ್ಯಕ್ತಪಡಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…