ಬೆಂಗಳೂರು, ವೈಟ್ಫೀಲ್ಡ್: ಮೂರು ತಿಂಗಳ ಹಿಂದೆ ಸಂಭವಿಸಿದ ಭೀಕರ ವಿದ್ಯುತ್ ಅಪಘಾತದಿಂದ ತೀವ್ರವಾಗಿ ಗಾಯಗೊಂಡ 17 ವರ್ಷದ ಪಶ್ಚಿಮ ಬಂಗಾಳ ಮೂಲದ ಯುವಕನಿಗೆ, ಮೆದುಳಿಗೆ ಫಂಗಸ್ ಹಿಡಿದಷ್ಟು ಗಂಭೀರ ಸ್ಥಿತಿಯಲ್ಲಿದ್ದರೂ, ಮೆಡಿಕವರ್ ಆಸ್ಪತ್ರೆಯ ನ್ಯೂರೋ ಸರ್ಜನ್ ಡಾ. ದೀಪಕ್ ಅವರ ಶಸ್ತ್ರಚಿಕಿತ್ಸೆಯಿಂದ ಹೊಸ ಬದುಕು ದೊರೆತಿದೆ.
ಆಘಾತದ ಪರಿಣಾಮವಾಗಿ ಯುವಕನ ಬಲ ಪಾರಿಯೆಟಲ್ ಭಾಗದ ತ್ವಚೆ ಮತ್ತು ಮೂಳೆ ಸಂಪೂರ್ಣವಾಗಿ ಹಾನಿಯಾಗಿದ್ದು, ಮೆದುಳಿನ ಭಾಗವೇ ಹೊರಬಿದ್ದಂತಹ ಪರಿಸ್ಥಿತಿ ಉಂಟಾಗಿತ್ತು. ಅಲ್ಲದೇ, ಆ ಭಾಗದಲ್ಲಿ ಸೋಂಕು ಹರಡಿದ ಪರಿಣಾಮ ಫಂಗಲ್ ಇನ್ಫೆಕ್ಷನ್ ಕೂಡ ಅಭಿವೃದ್ಧಿಯಾಗಿತ್ತು.
ಪಶ್ಚಿಮ ಬಂಗಾಳದಲ್ಲಿ ಆರಂಭಿಕ ಚಿಕಿತ್ಸೆ ಪಡೆದರೂ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ. ನಂತರ ಯುವಕನನ್ನು ಬೆಂಗಳೂರಿನ ವೈಟ್ಫೀಲ್ಡ್ನ ಮೆಡಿಕವರ್ ಆಸ್ಪತ್ರೆಗೆ ತರಲಾಗಿದ್ದು, ನ್ಯೂರೋ ಸರ್ಜನ್ ಡಾ. ದೀಪಕ್ ಅವರ ಸಲಹೆಯ ಮೇರೆಗೆ ತಕ್ಷಣವೇ ಶಸ್ತ್ರಚಿಕಿತ್ಸೆ ಕೈಗೊಳ್ಳಲಾಯಿತು.
ಆಗಮಿಸಿದಾಗ ಯುವಕನ ದೇಹದ ಎಡಭಾಗ ಸಂಪೂರ್ಣವಾಗಿ ದುರ್ಬಲವಾಗಿತ್ತು. ಡಾ. ದೀಪಕ್ ಅವರು ಮೆದುಳಿನ ಗಾಯದ ಭಾಗವನ್ನು ಕ್ಲೀನಿಂಗ್ ಮಾಡಿ, ಮೆದುಳಿನ ಮತ್ತು ಫ್ಲ್ಯಾಪ್ ಪುನರ್ ನಿರ್ಮಾಣ ಶಸ್ತ್ರಚಿಕಿತ್ಸೆ ನಡೆಸಲಾಯ್ತು. ಇದು ಅಪರೂಪದ ಹಾಗೂ ಅಪಾಯಕಾರಿಯಾದ ಶಸ್ತ್ರಚಿಕಿತ್ಸೆಯಾಗಿದ್ದು, ಅದನ್ನು ಯಶಸ್ವಿಯಾಗಿ ನೆರವೇರಿಸಿದರು.ಇಂದು ಯುವಕ ಸಂಪೂರ್ಣ ಗುಣಮುಖನಾಗಿ ತಾನು ಮನೆಗೆ ಮರಳಿದ್ದಾನೆ.
“ಇದು ಕೇವಲ ಶಸ್ತ್ರಚಿಕಿತ್ಸೆಯಲ್ಲ, ಜೀವದ ಮೇಲಿನ ವಿಜಯದ ಕಥೆಯಾಗಿದೆ. ಇಂತಹ ಪ್ರಕರಣಗಳು ನಮ್ಮ ಕರ್ತವ್ಯ ಮತ್ತು ಸಾಮರ್ಥ್ಯವನ್ನು ಸದಾ ನೆನಪಿಸುತ್ತವೆ,” ಎಂದು ಡಾ. ದೀಪಕ್ ಸಂತಸ ವ್ಯಕ್ತಪಡಿಸಿದರು.
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…