ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35,000 ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ- ಸಿ‌ಎಂ ಸಿದ್ದರಾಮಯ್ಯ

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35,000 ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಂದು ಬೆಂಗಳೂರಿನಲ್ಲಿ ಆಯೋಜಿಸಿದ್ದ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಸಂಘದ ವಜ್ರ ಮಹೋತ್ಸವವನ್ನು ಉದ್ಘಾಟಿಸಿ, ವಜ್ರಜ್ಯೋತಿ ಸ್ಮರಣ ಸಂಚಿಕೆ ಲೋಕಾರ್ಪಣೆಗೊಳಿಸಿ‌ ಅವರು ಮಾತನಾಡಿದರು.

ನಮ್ಮದು ನುಡಿದಂತೆ ನಡೆಯುವ ಸರ್ಕಾರ. ನಿಮ್ಮ ಬೇಡಿಕೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ. ಎನ್‌ಪಿಎಸ್ ಜಾರಿ ಮಾಡಿದ್ದು ಕೇಂದ್ರ ಸರ್ಕಾರ. ನಾವು ಒಪಿಎಸ್ ಜಾರಿಯನ್ನು ಪ್ರಣಾಳಿಕೆಯಲ್ಲೇ ಘೋಷಿಸಿದ್ದೇವೆ. ಈ ಬಗ್ಗೆ ಚರ್ಚಿಸಿ ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

1964ರಲ್ಲಿ ಆರಂಭವಾದ ನೌಕರರ ಸಂಘ ಇಷ್ಟು ಸುದೀರ್ಘ ಕಾಲ ನಿರಂತರವಾಗಿ ನೌಕರರ ಕಷ್ಟ ಸುಖಗಳಿಗೆ ಸ್ಪಂದಿಸಿ, ಪ್ರಾಮಾಣಿಕ ಹೋರಾಟ ನಡೆಸುತ್ತಿದೆ. ಜೊತೆಗೆ ಗ್ರಾಹಕರಿಗೆ ಸಮರ್ಪಕ ವಿದ್ಯುತ್ ಪೂರೈಸುವ ಹೊಣೆಗಾರಿಕೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದೀರಿ. ಇದಕ್ಕೆ ನೀವೆಲ್ಲರೂ ಅಭಿನಂದನಾರ್ಹರು ಎಂದು ತಿಳಿಸಿದರು.

ಇಡೀ ಏಷ್ಯಾದಲ್ಲಿ ಮೊದಲಿಗೆ ವಿದ್ಯುತ್ ಉತ್ಪಾದನೆ ಆಗಿದ್ದು 1902 ರಲ್ಲಿ ಕರ್ನಾಟಕದಲ್ಲಿ. 1905 ರಲ್ಲಿ ಬೆಂಗಳೂರಿನಲ್ಲಿ ಪ್ರಥಮ ವಿದ್ಯುತ್ ಸರಬರಾಜು ಕಂಪನಿ ಆರಂಭಿಸಲಾಯಿತು. 1908 ರಲ್ಲಿ ಮೊದಲ ಬಾರಿ ಅರಮನೆಗೆ ವಿದ್ಯುತ್ ಬಂತು. ಅಲ್ಲಿಂದ ಇಲ್ಲಿಯವರೆಗೆ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಹಂತ ಹಂತವಾಗಿ ಪ್ರಗತಿ ಸಾಧಿಸುತ್ತಾ, ಇಂದು 34,000 ಮೆಗಾ ವ್ಯಾಟ್ ಉತ್ಪಾದನೆ ಮಾಡುತ್ತಿರುವ ರಾಜ್ಯ ಎನ್ನುವ ಹೆಗ್ಗಳಿಕೆ ನಮ್ಮದಾಗಿದೆ ಎಂದು ಹೇಳಿದರು.

ಆಹಾರ ಉತ್ಪಾದನೆಯಲ್ಲಿ ನಾವು ಸ್ವಾವಲಂಬಿಗಳಾಗುತ್ತಿರುವುದು ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬಿಗಳಾಗಿರುವ ಕಾರಣಕ್ಕೇ.
ರೈತರ ಕೃಷಿಗೆ ಪಂಪ್ ಸೆಟ್ ಗಳಿಗೆ ಹಗಲಲ್ಲೂ 7 ಗಂಟೆ ಅಗತ್ಯ ವಿದ್ಯುತ್ ಸರಬರಾಜು ಮಾಡಲು ಶಕ್ತರಾಗುತ್ತೇವೆ. ಈ ಗುರಿ ಇಟ್ಟುಕೊಂಡು ಕೆಲಸಗಳು ನಡೆಯುತ್ತಿವೆ. 60,000 ಮೆಗಾ ವ್ಯಾಟ್ ಉತ್ಪಾದನೆ ಗುರಿ ನಾವು ತಲುಪಿದ ತಕ್ಷಣ ಇದು ಸಾಧ್ಯವಾಗಲಿದೆ. ವಿದ್ಯುತ್ ಪ್ರಮುಖ ಕಚ್ಚಾವಸ್ತು ಎನ್ನುವುದನ್ನು ನಾವು ಮರೆಯಬಾರದು ಎಂದು ತಿಳಿಸಿದರು.

ನೌಕರರು ಮತ್ತು ಕಾರ್ಮಿಕರು ಬಹಳ ಶ್ರಮ ವಹಿಸಿ ಕೆಲಸ ನಿರ್ವಹಿಸುತ್ತಿದ್ದೀರಿ. ನಿಮ್ಮ ಎಲ್ಲಾ ಬೇಡಿಕೆಗಳನ್ನೂ ಈಡೇರಿಸಲು ನಮ್ಮ ಸರ್ಕಾರ ಸಿದ್ಧವಿದೆ. ನಾವು ನಿಮ್ಮ ಜೊತೆಗೆ ಇದ್ದೇವೆ. ನೀವು ನಮ್ಮ ಜೊತೆಗೆ ಇರಬೇಕು ಎಂದರು.

Ramesh Babu

Journalist

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

8 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

8 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

16 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

1 day ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

2 days ago