ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35,000 ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ- ಸಿ‌ಎಂ ಸಿದ್ದರಾಮಯ್ಯ

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35,000 ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಂದು ಬೆಂಗಳೂರಿನಲ್ಲಿ ಆಯೋಜಿಸಿದ್ದ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಸಂಘದ ವಜ್ರ ಮಹೋತ್ಸವವನ್ನು ಉದ್ಘಾಟಿಸಿ, ವಜ್ರಜ್ಯೋತಿ ಸ್ಮರಣ ಸಂಚಿಕೆ ಲೋಕಾರ್ಪಣೆಗೊಳಿಸಿ‌ ಅವರು ಮಾತನಾಡಿದರು.

ನಮ್ಮದು ನುಡಿದಂತೆ ನಡೆಯುವ ಸರ್ಕಾರ. ನಿಮ್ಮ ಬೇಡಿಕೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ. ಎನ್‌ಪಿಎಸ್ ಜಾರಿ ಮಾಡಿದ್ದು ಕೇಂದ್ರ ಸರ್ಕಾರ. ನಾವು ಒಪಿಎಸ್ ಜಾರಿಯನ್ನು ಪ್ರಣಾಳಿಕೆಯಲ್ಲೇ ಘೋಷಿಸಿದ್ದೇವೆ. ಈ ಬಗ್ಗೆ ಚರ್ಚಿಸಿ ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

1964ರಲ್ಲಿ ಆರಂಭವಾದ ನೌಕರರ ಸಂಘ ಇಷ್ಟು ಸುದೀರ್ಘ ಕಾಲ ನಿರಂತರವಾಗಿ ನೌಕರರ ಕಷ್ಟ ಸುಖಗಳಿಗೆ ಸ್ಪಂದಿಸಿ, ಪ್ರಾಮಾಣಿಕ ಹೋರಾಟ ನಡೆಸುತ್ತಿದೆ. ಜೊತೆಗೆ ಗ್ರಾಹಕರಿಗೆ ಸಮರ್ಪಕ ವಿದ್ಯುತ್ ಪೂರೈಸುವ ಹೊಣೆಗಾರಿಕೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದೀರಿ. ಇದಕ್ಕೆ ನೀವೆಲ್ಲರೂ ಅಭಿನಂದನಾರ್ಹರು ಎಂದು ತಿಳಿಸಿದರು.

ಇಡೀ ಏಷ್ಯಾದಲ್ಲಿ ಮೊದಲಿಗೆ ವಿದ್ಯುತ್ ಉತ್ಪಾದನೆ ಆಗಿದ್ದು 1902 ರಲ್ಲಿ ಕರ್ನಾಟಕದಲ್ಲಿ. 1905 ರಲ್ಲಿ ಬೆಂಗಳೂರಿನಲ್ಲಿ ಪ್ರಥಮ ವಿದ್ಯುತ್ ಸರಬರಾಜು ಕಂಪನಿ ಆರಂಭಿಸಲಾಯಿತು. 1908 ರಲ್ಲಿ ಮೊದಲ ಬಾರಿ ಅರಮನೆಗೆ ವಿದ್ಯುತ್ ಬಂತು. ಅಲ್ಲಿಂದ ಇಲ್ಲಿಯವರೆಗೆ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಹಂತ ಹಂತವಾಗಿ ಪ್ರಗತಿ ಸಾಧಿಸುತ್ತಾ, ಇಂದು 34,000 ಮೆಗಾ ವ್ಯಾಟ್ ಉತ್ಪಾದನೆ ಮಾಡುತ್ತಿರುವ ರಾಜ್ಯ ಎನ್ನುವ ಹೆಗ್ಗಳಿಕೆ ನಮ್ಮದಾಗಿದೆ ಎಂದು ಹೇಳಿದರು.

ಆಹಾರ ಉತ್ಪಾದನೆಯಲ್ಲಿ ನಾವು ಸ್ವಾವಲಂಬಿಗಳಾಗುತ್ತಿರುವುದು ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬಿಗಳಾಗಿರುವ ಕಾರಣಕ್ಕೇ.
ರೈತರ ಕೃಷಿಗೆ ಪಂಪ್ ಸೆಟ್ ಗಳಿಗೆ ಹಗಲಲ್ಲೂ 7 ಗಂಟೆ ಅಗತ್ಯ ವಿದ್ಯುತ್ ಸರಬರಾಜು ಮಾಡಲು ಶಕ್ತರಾಗುತ್ತೇವೆ. ಈ ಗುರಿ ಇಟ್ಟುಕೊಂಡು ಕೆಲಸಗಳು ನಡೆಯುತ್ತಿವೆ. 60,000 ಮೆಗಾ ವ್ಯಾಟ್ ಉತ್ಪಾದನೆ ಗುರಿ ನಾವು ತಲುಪಿದ ತಕ್ಷಣ ಇದು ಸಾಧ್ಯವಾಗಲಿದೆ. ವಿದ್ಯುತ್ ಪ್ರಮುಖ ಕಚ್ಚಾವಸ್ತು ಎನ್ನುವುದನ್ನು ನಾವು ಮರೆಯಬಾರದು ಎಂದು ತಿಳಿಸಿದರು.

ನೌಕರರು ಮತ್ತು ಕಾರ್ಮಿಕರು ಬಹಳ ಶ್ರಮ ವಹಿಸಿ ಕೆಲಸ ನಿರ್ವಹಿಸುತ್ತಿದ್ದೀರಿ. ನಿಮ್ಮ ಎಲ್ಲಾ ಬೇಡಿಕೆಗಳನ್ನೂ ಈಡೇರಿಸಲು ನಮ್ಮ ಸರ್ಕಾರ ಸಿದ್ಧವಿದೆ. ನಾವು ನಿಮ್ಮ ಜೊತೆಗೆ ಇದ್ದೇವೆ. ನೀವು ನಮ್ಮ ಜೊತೆಗೆ ಇರಬೇಕು ಎಂದರು.

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

4 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

4 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

5 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

10 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

16 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago