ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35,000 ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಇಂದು ಬೆಂಗಳೂರಿನಲ್ಲಿ ಆಯೋಜಿಸಿದ್ದ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಸಂಘದ ವಜ್ರ ಮಹೋತ್ಸವವನ್ನು ಉದ್ಘಾಟಿಸಿ, ವಜ್ರಜ್ಯೋತಿ ಸ್ಮರಣ ಸಂಚಿಕೆ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ನಮ್ಮದು ನುಡಿದಂತೆ ನಡೆಯುವ ಸರ್ಕಾರ. ನಿಮ್ಮ ಬೇಡಿಕೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ. ಎನ್ಪಿಎಸ್ ಜಾರಿ ಮಾಡಿದ್ದು ಕೇಂದ್ರ ಸರ್ಕಾರ. ನಾವು ಒಪಿಎಸ್ ಜಾರಿಯನ್ನು ಪ್ರಣಾಳಿಕೆಯಲ್ಲೇ ಘೋಷಿಸಿದ್ದೇವೆ. ಈ ಬಗ್ಗೆ ಚರ್ಚಿಸಿ ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
1964ರಲ್ಲಿ ಆರಂಭವಾದ ನೌಕರರ ಸಂಘ ಇಷ್ಟು ಸುದೀರ್ಘ ಕಾಲ ನಿರಂತರವಾಗಿ ನೌಕರರ ಕಷ್ಟ ಸುಖಗಳಿಗೆ ಸ್ಪಂದಿಸಿ, ಪ್ರಾಮಾಣಿಕ ಹೋರಾಟ ನಡೆಸುತ್ತಿದೆ. ಜೊತೆಗೆ ಗ್ರಾಹಕರಿಗೆ ಸಮರ್ಪಕ ವಿದ್ಯುತ್ ಪೂರೈಸುವ ಹೊಣೆಗಾರಿಕೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದೀರಿ. ಇದಕ್ಕೆ ನೀವೆಲ್ಲರೂ ಅಭಿನಂದನಾರ್ಹರು ಎಂದು ತಿಳಿಸಿದರು.
ಇಡೀ ಏಷ್ಯಾದಲ್ಲಿ ಮೊದಲಿಗೆ ವಿದ್ಯುತ್ ಉತ್ಪಾದನೆ ಆಗಿದ್ದು 1902 ರಲ್ಲಿ ಕರ್ನಾಟಕದಲ್ಲಿ. 1905 ರಲ್ಲಿ ಬೆಂಗಳೂರಿನಲ್ಲಿ ಪ್ರಥಮ ವಿದ್ಯುತ್ ಸರಬರಾಜು ಕಂಪನಿ ಆರಂಭಿಸಲಾಯಿತು. 1908 ರಲ್ಲಿ ಮೊದಲ ಬಾರಿ ಅರಮನೆಗೆ ವಿದ್ಯುತ್ ಬಂತು. ಅಲ್ಲಿಂದ ಇಲ್ಲಿಯವರೆಗೆ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಹಂತ ಹಂತವಾಗಿ ಪ್ರಗತಿ ಸಾಧಿಸುತ್ತಾ, ಇಂದು 34,000 ಮೆಗಾ ವ್ಯಾಟ್ ಉತ್ಪಾದನೆ ಮಾಡುತ್ತಿರುವ ರಾಜ್ಯ ಎನ್ನುವ ಹೆಗ್ಗಳಿಕೆ ನಮ್ಮದಾಗಿದೆ ಎಂದು ಹೇಳಿದರು.
ಆಹಾರ ಉತ್ಪಾದನೆಯಲ್ಲಿ ನಾವು ಸ್ವಾವಲಂಬಿಗಳಾಗುತ್ತಿರುವುದು ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬಿಗಳಾಗಿರುವ ಕಾರಣಕ್ಕೇ.
ರೈತರ ಕೃಷಿಗೆ ಪಂಪ್ ಸೆಟ್ ಗಳಿಗೆ ಹಗಲಲ್ಲೂ 7 ಗಂಟೆ ಅಗತ್ಯ ವಿದ್ಯುತ್ ಸರಬರಾಜು ಮಾಡಲು ಶಕ್ತರಾಗುತ್ತೇವೆ. ಈ ಗುರಿ ಇಟ್ಟುಕೊಂಡು ಕೆಲಸಗಳು ನಡೆಯುತ್ತಿವೆ. 60,000 ಮೆಗಾ ವ್ಯಾಟ್ ಉತ್ಪಾದನೆ ಗುರಿ ನಾವು ತಲುಪಿದ ತಕ್ಷಣ ಇದು ಸಾಧ್ಯವಾಗಲಿದೆ. ವಿದ್ಯುತ್ ಪ್ರಮುಖ ಕಚ್ಚಾವಸ್ತು ಎನ್ನುವುದನ್ನು ನಾವು ಮರೆಯಬಾರದು ಎಂದು ತಿಳಿಸಿದರು.
ನೌಕರರು ಮತ್ತು ಕಾರ್ಮಿಕರು ಬಹಳ ಶ್ರಮ ವಹಿಸಿ ಕೆಲಸ ನಿರ್ವಹಿಸುತ್ತಿದ್ದೀರಿ. ನಿಮ್ಮ ಎಲ್ಲಾ ಬೇಡಿಕೆಗಳನ್ನೂ ಈಡೇರಿಸಲು ನಮ್ಮ ಸರ್ಕಾರ ಸಿದ್ಧವಿದೆ. ನಾವು ನಿಮ್ಮ ಜೊತೆಗೆ ಇದ್ದೇವೆ. ನೀವು ನಮ್ಮ ಜೊತೆಗೆ ಇರಬೇಕು ಎಂದರು.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…