ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ರಾಜ್ಯ ಸರ್ಕಾರವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿದ್ಯುತ್ ಮಗ್ಗ ನೇಕಾರರು ಹಾಗೂ ಮಗ್ಗ ಪೂರ್ವ ಚಟುವಟಿಕೆಯಲ್ಲಿ ತೊಡಗಿರುವ ಕೆಲಸಗಾಗರರ ಗಣತಿ ಸಮೀಕ್ಷೆಯನ್ನು ಹಮ್ಮಿಕೊಂಡಿದ್ದು, ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಕೇಂದ್ರ ಕಛೇರಿ ಬೆಂಗಳೂರು ರವರು ಸೂಚಿಸಲಾದಂತೆ ಸಮೀಕ್ಷೆಯಲ್ಲಿ ಬಿಟ್ಟುಹೋದ, ತಪ್ಪಿಹೋದ, ಹೊಸದಾಗಿ ಸೇರ್ಪಡೆ ಘಟಕ, ನೇಕಾರರು, ಕೆಲಸಗಾರರನ್ನು ಕೂಡಲೇ ಗಣತಿ ಸಮೀಕ್ಷೆಯಲ್ಲಿ ಸೇರ್ಪಡೆ ಮಾಡಲು ಸಮಯ ಮಿತಿ(ಕಾಲ ಗಡುವು) ನೀಡಿರುತ್ತಾರೆ.
ಗಣತಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳದೇ ಇರುವ ಅಥವಾ ಬಿಟ್ಟು ಹೋಗಿರುವ ನೇಕಾರರು ಸಮೀಕ್ಷೆಗೆ ದಾಖಲಾತಿಗಳೊಂದಿಗೆ 2023ರ ಜುಲೈ 15 ರೊಳಗಾಗಿ ಹಾಜರು ಪಡಿಸಲು ಅಂತಿಮ ತಿಳುವಳಿಕೆ ನೀಡಲಾಗಿದೆ.
ಘಟಕದ ಮಾಲೀಕರು: ಇತ್ತೀಚಿನ ವಿದ್ಯುತ್ ಬಿಲ್, ಆಧಾರ್ನೊಂದಿಗೆ ಕಚೇರಿಗೆ
ಭೇಟಿ ನೀಡಿ ಮಾಹಿತಿಯನ್ನು ನಮೂದಿಸುವುದು.
ಕೂಲಿ ನೇಕಾರರು/ ಕೆಲಸಗಾರರು: ಘಟಕದ ಮಾಲಿಕರಿಂದ ಘಟಕದಲ್ಲಿ ಕೂಡ ನೇಯ್ಗೆ ವೃತ್ತಿ ಮಾಡುತ್ತಿರುವ ಬಗ್ಗೆ ದೃಢೀಕರಣ ಪಡೆದು ಕಚೇರಿಗೆ ಭೇಟಿ ನೀಡಿ ಮಾಹಿತಿಯನ್ನು ನಮೂದಿಸುವುದು.
ನೇಕಾರರಿಂದ ಮಾಹಿತಿ ಸ್ವೀಕೃತಿಯಾದ ನಂತರ ಎಎಂಎಸ್ ಸಂಸ್ಥೆ ವತಿಯಿಂದ ಗಣತಿ ಕ್ರಮ ಕೈಗೊಳ್ಳಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಂಯೋಜಕ ಪವನ್ ಕುಮಾರ್ ಮೊ.ಸಂ.:7406691372 ಅಥವಾ ನಗರದ ಕೆಐಎಡಿಬಿ ಅಪೇರಲ್ ಪಾರ್ಕ್ ಬಳಿಯ ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡದ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪನಿರ್ದೇಶಕಿ ಸೌಮ್ಯ.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…