ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ರಾಜ್ಯ ಸರ್ಕಾರವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿದ್ಯುತ್ ಮಗ್ಗ ನೇಕಾರರು ಹಾಗೂ ಮಗ್ಗ ಪೂರ್ವ ಚಟುವಟಿಕೆಯಲ್ಲಿ ತೊಡಗಿರುವ ಕೆಲಸಗಾಗರರ ಗಣತಿ ಸಮೀಕ್ಷೆಯನ್ನು ಹಮ್ಮಿಕೊಂಡಿದ್ದು, ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಕೇಂದ್ರ ಕಛೇರಿ ಬೆಂಗಳೂರು ರವರು ಸೂಚಿಸಲಾದಂತೆ ಸಮೀಕ್ಷೆಯಲ್ಲಿ ಬಿಟ್ಟುಹೋದ, ತಪ್ಪಿಹೋದ, ಹೊಸದಾಗಿ ಸೇರ್ಪಡೆ ಘಟಕ, ನೇಕಾರರು, ಕೆಲಸಗಾರರನ್ನು ಕೂಡಲೇ ಗಣತಿ ಸಮೀಕ್ಷೆಯಲ್ಲಿ ಸೇರ್ಪಡೆ ಮಾಡಲು ಸಮಯ ಮಿತಿ(ಕಾಲ ಗಡುವು) ನೀಡಿರುತ್ತಾರೆ.
ಗಣತಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳದೇ ಇರುವ ಅಥವಾ ಬಿಟ್ಟು ಹೋಗಿರುವ ನೇಕಾರರು ಸಮೀಕ್ಷೆಗೆ ದಾಖಲಾತಿಗಳೊಂದಿಗೆ 2023ರ ಜುಲೈ 15 ರೊಳಗಾಗಿ ಹಾಜರು ಪಡಿಸಲು ಅಂತಿಮ ತಿಳುವಳಿಕೆ ನೀಡಲಾಗಿದೆ.
ಘಟಕದ ಮಾಲೀಕರು: ಇತ್ತೀಚಿನ ವಿದ್ಯುತ್ ಬಿಲ್, ಆಧಾರ್ನೊಂದಿಗೆ ಕಚೇರಿಗೆ
ಭೇಟಿ ನೀಡಿ ಮಾಹಿತಿಯನ್ನು ನಮೂದಿಸುವುದು.
ಕೂಲಿ ನೇಕಾರರು/ ಕೆಲಸಗಾರರು: ಘಟಕದ ಮಾಲಿಕರಿಂದ ಘಟಕದಲ್ಲಿ ಕೂಡ ನೇಯ್ಗೆ ವೃತ್ತಿ ಮಾಡುತ್ತಿರುವ ಬಗ್ಗೆ ದೃಢೀಕರಣ ಪಡೆದು ಕಚೇರಿಗೆ ಭೇಟಿ ನೀಡಿ ಮಾಹಿತಿಯನ್ನು ನಮೂದಿಸುವುದು.
ನೇಕಾರರಿಂದ ಮಾಹಿತಿ ಸ್ವೀಕೃತಿಯಾದ ನಂತರ ಎಎಂಎಸ್ ಸಂಸ್ಥೆ ವತಿಯಿಂದ ಗಣತಿ ಕ್ರಮ ಕೈಗೊಳ್ಳಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಂಯೋಜಕ ಪವನ್ ಕುಮಾರ್ ಮೊ.ಸಂ.:7406691372 ಅಥವಾ ನಗರದ ಕೆಐಎಡಿಬಿ ಅಪೇರಲ್ ಪಾರ್ಕ್ ಬಳಿಯ ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡದ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪನಿರ್ದೇಶಕಿ ಸೌಮ್ಯ.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…
ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್ಕುಮಾರ್ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…