ವಿದ್ಯುತ್ ಮಗ್ಗ ನೇಕಾರರು ಹಾಗೂ ಮಗ್ಗ ಪೂರ್ವ ಚಟುವಟಿಕೆಯಲ್ಲಿ ತೊಡಗಿರುವ ನೇಕಾರರ ಗಣತಿ ಸಮೀಕ್ಷೆ

ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ರಾಜ್ಯ ಸರ್ಕಾರವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿದ್ಯುತ್‌ ಮಗ್ಗ ನೇಕಾರರು ಹಾಗೂ ಮಗ್ಗ ಪೂರ್ವ ಚಟುವಟಿಕೆಯಲ್ಲಿ ತೊಡಗಿರುವ ಕೆಲಸಗಾಗರರ ಗಣತಿ ಸಮೀಕ್ಷೆಯನ್ನು ಹಮ್ಮಿಕೊಂಡಿದ್ದು, ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಕೇಂದ್ರ ಕಛೇರಿ ಬೆಂಗಳೂರು ರವರು ಸೂಚಿಸಲಾದಂತೆ ಸಮೀಕ್ಷೆಯಲ್ಲಿ ಬಿಟ್ಟುಹೋದ, ತಪ್ಪಿಹೋದ, ಹೊಸದಾಗಿ ಸೇರ್ಪಡೆ ಘಟಕ, ನೇಕಾರರು, ಕೆಲಸಗಾರರನ್ನು ಕೂಡಲೇ ಗಣತಿ ಸಮೀಕ್ಷೆಯಲ್ಲಿ ಸೇರ್ಪಡೆ ಮಾಡಲು ಸಮಯ ಮಿತಿ(ಕಾಲ ಗಡುವು) ನೀಡಿರುತ್ತಾರೆ.

ಗಣತಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳದೇ ಇರುವ ಅಥವಾ ಬಿಟ್ಟು ಹೋಗಿರುವ ನೇಕಾರರು ಸಮೀಕ್ಷೆಗೆ ದಾಖಲಾತಿಗಳೊಂದಿಗೆ 2023ರ ಜುಲೈ 15 ರೊಳಗಾಗಿ ಹಾಜರು ಪಡಿಸಲು ಅಂತಿಮ ತಿಳುವಳಿಕೆ ನೀಡಲಾಗಿದೆ.

ಘಟಕದ ಮಾಲೀಕರು: ಇತ್ತೀಚಿನ ವಿದ್ಯುತ್ ಬಿಲ್, ಆಧಾರ್‌ನೊಂದಿಗೆ ಕಚೇರಿಗೆ
ಭೇಟಿ ನೀಡಿ ಮಾಹಿತಿಯನ್ನು ನಮೂದಿಸುವುದು.

ಕೂಲಿ ನೇಕಾರರು/ ಕೆಲಸಗಾರರು: ಘಟಕದ ಮಾಲಿಕರಿಂದ ಘಟಕದಲ್ಲಿ ಕೂಡ ನೇಯ್ಗೆ ವೃತ್ತಿ ಮಾಡುತ್ತಿರುವ ಬಗ್ಗೆ ದೃಢೀಕರಣ ಪಡೆದು ಕಚೇರಿಗೆ ಭೇಟಿ ನೀಡಿ ಮಾಹಿತಿಯನ್ನು ನಮೂದಿಸುವುದು.

ನೇಕಾರರಿಂದ ಮಾಹಿತಿ ಸ್ವೀಕೃತಿಯಾದ ನಂತರ ಎಎಂಎಸ್‌ ಸಂಸ್ಥೆ ವತಿಯಿಂದ ಗಣತಿ ಕ್ರಮ ಕೈಗೊಳ್ಳಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಸಂಯೋಜಕ ಪವನ್ ಕುಮಾರ್ ಮೊ.ಸಂ.:7406691372 ಅಥವಾ ನಗರದ ಕೆಐಎಡಿಬಿ ಅಪೇರಲ್ ಪಾರ್ಕ್ ಬಳಿಯ ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡದ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪನಿರ್ದೇಶಕಿ ಸೌಮ್ಯ.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ: ನೀರಿನ ಸಮಸ್ಯೆ ನೀಗಿಸುವಂತೆ ನಗರಸಭೆ ಸದಸ್ಯರ ಒತ್ತಾಯ

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…

41 minutes ago

ಗೃಹ ಅನಿಲ ಸೀಮಿತ ಬಳಕೆಗೆ ಡಿಸಿ ಸಲಹೆ: ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕೆ ಎನ್ ಅನುರಾಧಾ

ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…

1 hour ago

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

13 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

1 day ago