ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ರಾಜ್ಯ ಸರ್ಕಾರವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿದ್ಯುತ್ ಮಗ್ಗ ನೇಕಾರರು ಹಾಗೂ ಮಗ್ಗ ಪೂರ್ವ ಚಟುವಟಿಕೆಯಲ್ಲಿ ತೊಡಗಿರುವ ಕೆಲಸಗಾಗರರ ಗಣತಿ ಸಮೀಕ್ಷೆಯನ್ನು ಹಮ್ಮಿಕೊಂಡಿದ್ದು, ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಕೇಂದ್ರ ಕಛೇರಿ ಬೆಂಗಳೂರು ರವರು ಸೂಚಿಸಲಾದಂತೆ ಸಮೀಕ್ಷೆಯಲ್ಲಿ ಬಿಟ್ಟುಹೋದ, ತಪ್ಪಿಹೋದ, ಹೊಸದಾಗಿ ಸೇರ್ಪಡೆ ಘಟಕ, ನೇಕಾರರು, ಕೆಲಸಗಾರರನ್ನು ಕೂಡಲೇ ಗಣತಿ ಸಮೀಕ್ಷೆಯಲ್ಲಿ ಸೇರ್ಪಡೆ ಮಾಡಲು ಸಮಯ ಮಿತಿ(ಕಾಲ ಗಡುವು) ನೀಡಿರುತ್ತಾರೆ.
ಗಣತಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳದೇ ಇರುವ ಅಥವಾ ಬಿಟ್ಟು ಹೋಗಿರುವ ನೇಕಾರರು ಸಮೀಕ್ಷೆಗೆ ದಾಖಲಾತಿಗಳೊಂದಿಗೆ 2023ರ ಜುಲೈ 15 ರೊಳಗಾಗಿ ಹಾಜರು ಪಡಿಸಲು ಅಂತಿಮ ತಿಳುವಳಿಕೆ ನೀಡಲಾಗಿದೆ.
ಘಟಕದ ಮಾಲೀಕರು: ಇತ್ತೀಚಿನ ವಿದ್ಯುತ್ ಬಿಲ್, ಆಧಾರ್ನೊಂದಿಗೆ ಕಚೇರಿಗೆ
ಭೇಟಿ ನೀಡಿ ಮಾಹಿತಿಯನ್ನು ನಮೂದಿಸುವುದು.
ಕೂಲಿ ನೇಕಾರರು/ ಕೆಲಸಗಾರರು: ಘಟಕದ ಮಾಲಿಕರಿಂದ ಘಟಕದಲ್ಲಿ ಕೂಡ ನೇಯ್ಗೆ ವೃತ್ತಿ ಮಾಡುತ್ತಿರುವ ಬಗ್ಗೆ ದೃಢೀಕರಣ ಪಡೆದು ಕಚೇರಿಗೆ ಭೇಟಿ ನೀಡಿ ಮಾಹಿತಿಯನ್ನು ನಮೂದಿಸುವುದು.
ನೇಕಾರರಿಂದ ಮಾಹಿತಿ ಸ್ವೀಕೃತಿಯಾದ ನಂತರ ಎಎಂಎಸ್ ಸಂಸ್ಥೆ ವತಿಯಿಂದ ಗಣತಿ ಕ್ರಮ ಕೈಗೊಳ್ಳಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಂಯೋಜಕ ಪವನ್ ಕುಮಾರ್ ಮೊ.ಸಂ.:7406691372 ಅಥವಾ ನಗರದ ಕೆಐಎಡಿಬಿ ಅಪೇರಲ್ ಪಾರ್ಕ್ ಬಳಿಯ ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡದ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪನಿರ್ದೇಶಕಿ ಸೌಮ್ಯ.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…