ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ರಾಜ್ಯ ಸರ್ಕಾರವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿದ್ಯುತ್ ಮಗ್ಗ ನೇಕಾರರು ಹಾಗೂ ಮಗ್ಗ ಪೂರ್ವ ಚಟುವಟಿಕೆಯಲ್ಲಿ ತೊಡಗಿರುವ ಕೆಲಸಗಾಗರರ ಗಣತಿ ಸಮೀಕ್ಷೆಯನ್ನು ಹಮ್ಮಿಕೊಂಡಿದ್ದು, ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಕೇಂದ್ರ ಕಛೇರಿ ಬೆಂಗಳೂರು ರವರು ಸೂಚಿಸಲಾದಂತೆ ಸಮೀಕ್ಷೆಯಲ್ಲಿ ಬಿಟ್ಟುಹೋದ, ತಪ್ಪಿಹೋದ, ಹೊಸದಾಗಿ ಸೇರ್ಪಡೆ ಘಟಕ, ನೇಕಾರರು, ಕೆಲಸಗಾರರನ್ನು ಕೂಡಲೇ ಗಣತಿ ಸಮೀಕ್ಷೆಯಲ್ಲಿ ಸೇರ್ಪಡೆ ಮಾಡಲು ಸಮಯ ಮಿತಿ(ಕಾಲ ಗಡುವು) ನೀಡಿರುತ್ತಾರೆ.
ಗಣತಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳದೇ ಇರುವ ಅಥವಾ ಬಿಟ್ಟು ಹೋಗಿರುವ ನೇಕಾರರು ಸಮೀಕ್ಷೆಗೆ ದಾಖಲಾತಿಗಳೊಂದಿಗೆ 2023ರ ಜುಲೈ 15 ರೊಳಗಾಗಿ ಹಾಜರು ಪಡಿಸಲು ಅಂತಿಮ ತಿಳುವಳಿಕೆ ನೀಡಲಾಗಿದೆ.
ಘಟಕದ ಮಾಲೀಕರು: ಇತ್ತೀಚಿನ ವಿದ್ಯುತ್ ಬಿಲ್, ಆಧಾರ್ನೊಂದಿಗೆ ಕಚೇರಿಗೆ
ಭೇಟಿ ನೀಡಿ ಮಾಹಿತಿಯನ್ನು ನಮೂದಿಸುವುದು.
ಕೂಲಿ ನೇಕಾರರು/ ಕೆಲಸಗಾರರು: ಘಟಕದ ಮಾಲಿಕರಿಂದ ಘಟಕದಲ್ಲಿ ಕೂಡ ನೇಯ್ಗೆ ವೃತ್ತಿ ಮಾಡುತ್ತಿರುವ ಬಗ್ಗೆ ದೃಢೀಕರಣ ಪಡೆದು ಕಚೇರಿಗೆ ಭೇಟಿ ನೀಡಿ ಮಾಹಿತಿಯನ್ನು ನಮೂದಿಸುವುದು.
ನೇಕಾರರಿಂದ ಮಾಹಿತಿ ಸ್ವೀಕೃತಿಯಾದ ನಂತರ ಎಎಂಎಸ್ ಸಂಸ್ಥೆ ವತಿಯಿಂದ ಗಣತಿ ಕ್ರಮ ಕೈಗೊಳ್ಳಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಂಯೋಜಕ ಪವನ್ ಕುಮಾರ್ ಮೊ.ಸಂ.:7406691372 ಅಥವಾ ನಗರದ ಕೆಐಎಡಿಬಿ ಅಪೇರಲ್ ಪಾರ್ಕ್ ಬಳಿಯ ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡದ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪನಿರ್ದೇಶಕಿ ಸೌಮ್ಯ.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…