ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ರಾಜ್ಯ ಸರ್ಕಾರವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿದ್ಯುತ್ ಮಗ್ಗ ನೇಕಾರರು ಹಾಗೂ ಮಗ್ಗ ಪೂರ್ವ ಚಟುವಟಿಕೆಯಲ್ಲಿ ತೊಡಗಿರುವ ಕೆಲಸಗಾಗರರ ಗಣತಿ ಸಮೀಕ್ಷೆಯನ್ನು ಹಮ್ಮಿಕೊಂಡಿದ್ದು, ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಕೇಂದ್ರ ಕಛೇರಿ ಬೆಂಗಳೂರು ರವರು ಸೂಚಿಸಲಾದಂತೆ ಸಮೀಕ್ಷೆಯಲ್ಲಿ ಬಿಟ್ಟುಹೋದ, ತಪ್ಪಿಹೋದ, ಹೊಸದಾಗಿ ಸೇರ್ಪಡೆ ಘಟಕ, ನೇಕಾರರು, ಕೆಲಸಗಾರರನ್ನು ಕೂಡಲೇ ಗಣತಿ ಸಮೀಕ್ಷೆಯಲ್ಲಿ ಸೇರ್ಪಡೆ ಮಾಡಲು ಸಮಯ ಮಿತಿ(ಕಾಲ ಗಡುವು) ನೀಡಿರುತ್ತಾರೆ.
ಗಣತಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳದೇ ಇರುವ ಅಥವಾ ಬಿಟ್ಟು ಹೋಗಿರುವ ನೇಕಾರರು ಸಮೀಕ್ಷೆಗೆ ದಾಖಲಾತಿಗಳೊಂದಿಗೆ 2023ರ ಜುಲೈ 15 ರೊಳಗಾಗಿ ಹಾಜರು ಪಡಿಸಲು ಅಂತಿಮ ತಿಳುವಳಿಕೆ ನೀಡಲಾಗಿದೆ.
ಘಟಕದ ಮಾಲೀಕರು: ಇತ್ತೀಚಿನ ವಿದ್ಯುತ್ ಬಿಲ್, ಆಧಾರ್ನೊಂದಿಗೆ ಕಚೇರಿಗೆ
ಭೇಟಿ ನೀಡಿ ಮಾಹಿತಿಯನ್ನು ನಮೂದಿಸುವುದು.
ಕೂಲಿ ನೇಕಾರರು/ ಕೆಲಸಗಾರರು: ಘಟಕದ ಮಾಲಿಕರಿಂದ ಘಟಕದಲ್ಲಿ ಕೂಡ ನೇಯ್ಗೆ ವೃತ್ತಿ ಮಾಡುತ್ತಿರುವ ಬಗ್ಗೆ ದೃಢೀಕರಣ ಪಡೆದು ಕಚೇರಿಗೆ ಭೇಟಿ ನೀಡಿ ಮಾಹಿತಿಯನ್ನು ನಮೂದಿಸುವುದು.
ನೇಕಾರರಿಂದ ಮಾಹಿತಿ ಸ್ವೀಕೃತಿಯಾದ ನಂತರ ಎಎಂಎಸ್ ಸಂಸ್ಥೆ ವತಿಯಿಂದ ಗಣತಿ ಕ್ರಮ ಕೈಗೊಳ್ಳಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಂಯೋಜಕ ಪವನ್ ಕುಮಾರ್ ಮೊ.ಸಂ.:7406691372 ಅಥವಾ ನಗರದ ಕೆಐಎಡಿಬಿ ಅಪೇರಲ್ ಪಾರ್ಕ್ ಬಳಿಯ ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡದ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪನಿರ್ದೇಶಕಿ ಸೌಮ್ಯ.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…