ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ರಾಜ್ಯ ಸರ್ಕಾರವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿದ್ಯುತ್ ಮಗ್ಗ ನೇಕಾರರು ಹಾಗೂ ಮಗ್ಗ ಪೂರ್ವ ಚಟುವಟಿಕೆಯಲ್ಲಿ ತೊಡಗಿರುವ ಕೆಲಸಗಾಗರರ ಗಣತಿ ಸಮೀಕ್ಷೆಯನ್ನು ಹಮ್ಮಿಕೊಂಡಿದ್ದು, ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಕೇಂದ್ರ ಕಛೇರಿ ಬೆಂಗಳೂರು ರವರು ಸೂಚಿಸಲಾದಂತೆ ಸಮೀಕ್ಷೆಯಲ್ಲಿ ಬಿಟ್ಟುಹೋದ, ತಪ್ಪಿಹೋದ, ಹೊಸದಾಗಿ ಸೇರ್ಪಡೆ ಘಟಕ, ನೇಕಾರರು, ಕೆಲಸಗಾರರನ್ನು ಕೂಡಲೇ ಗಣತಿ ಸಮೀಕ್ಷೆಯಲ್ಲಿ ಸೇರ್ಪಡೆ ಮಾಡಲು ಸಮಯ ಮಿತಿ(ಕಾಲ ಗಡುವು) ನೀಡಿರುತ್ತಾರೆ.
ಗಣತಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳದೇ ಇರುವ ಅಥವಾ ಬಿಟ್ಟು ಹೋಗಿರುವ ನೇಕಾರರು ಸಮೀಕ್ಷೆಗೆ ದಾಖಲಾತಿಗಳೊಂದಿಗೆ 2023ರ ಜುಲೈ 15 ರೊಳಗಾಗಿ ಹಾಜರು ಪಡಿಸಲು ಅಂತಿಮ ತಿಳುವಳಿಕೆ ನೀಡಲಾಗಿದೆ.
ಘಟಕದ ಮಾಲೀಕರು: ಇತ್ತೀಚಿನ ವಿದ್ಯುತ್ ಬಿಲ್, ಆಧಾರ್ನೊಂದಿಗೆ ಕಚೇರಿಗೆ
ಭೇಟಿ ನೀಡಿ ಮಾಹಿತಿಯನ್ನು ನಮೂದಿಸುವುದು.
ಕೂಲಿ ನೇಕಾರರು/ ಕೆಲಸಗಾರರು: ಘಟಕದ ಮಾಲಿಕರಿಂದ ಘಟಕದಲ್ಲಿ ಕೂಡ ನೇಯ್ಗೆ ವೃತ್ತಿ ಮಾಡುತ್ತಿರುವ ಬಗ್ಗೆ ದೃಢೀಕರಣ ಪಡೆದು ಕಚೇರಿಗೆ ಭೇಟಿ ನೀಡಿ ಮಾಹಿತಿಯನ್ನು ನಮೂದಿಸುವುದು.
ನೇಕಾರರಿಂದ ಮಾಹಿತಿ ಸ್ವೀಕೃತಿಯಾದ ನಂತರ ಎಎಂಎಸ್ ಸಂಸ್ಥೆ ವತಿಯಿಂದ ಗಣತಿ ಕ್ರಮ ಕೈಗೊಳ್ಳಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಂಯೋಜಕ ಪವನ್ ಕುಮಾರ್ ಮೊ.ಸಂ.:7406691372 ಅಥವಾ ನಗರದ ಕೆಐಎಡಿಬಿ ಅಪೇರಲ್ ಪಾರ್ಕ್ ಬಳಿಯ ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡದ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪನಿರ್ದೇಶಕಿ ಸೌಮ್ಯ.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…