ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ರಾಜ್ಯ ಸರ್ಕಾರವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿದ್ಯುತ್ ಮಗ್ಗ ನೇಕಾರರು ಹಾಗೂ ಮಗ್ಗ ಪೂರ್ವ ಚಟುವಟಿಕೆಯಲ್ಲಿ ತೊಡಗಿರುವ ಕೆಲಸಗಾಗರರ ಗಣತಿ ಸಮೀಕ್ಷೆಯನ್ನು ಹಮ್ಮಿಕೊಂಡಿದ್ದು, ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಕೇಂದ್ರ ಕಛೇರಿ ಬೆಂಗಳೂರು ರವರು ಸೂಚಿಸಲಾದಂತೆ ಸಮೀಕ್ಷೆಯಲ್ಲಿ ಬಿಟ್ಟುಹೋದ, ತಪ್ಪಿಹೋದ, ಹೊಸದಾಗಿ ಸೇರ್ಪಡೆ ಘಟಕ, ನೇಕಾರರು, ಕೆಲಸಗಾರರನ್ನು ಕೂಡಲೇ ಗಣತಿ ಸಮೀಕ್ಷೆಯಲ್ಲಿ ಸೇರ್ಪಡೆ ಮಾಡಲು ಸಮಯ ಮಿತಿ(ಕಾಲ ಗಡುವು) ನೀಡಿರುತ್ತಾರೆ.
ಗಣತಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳದೇ ಇರುವ ಅಥವಾ ಬಿಟ್ಟು ಹೋಗಿರುವ ನೇಕಾರರು ಸಮೀಕ್ಷೆಗೆ ದಾಖಲಾತಿಗಳೊಂದಿಗೆ 2023ರ ಜುಲೈ 15 ರೊಳಗಾಗಿ ಹಾಜರು ಪಡಿಸಲು ಅಂತಿಮ ತಿಳುವಳಿಕೆ ನೀಡಲಾಗಿದೆ.
ಘಟಕದ ಮಾಲೀಕರು: ಇತ್ತೀಚಿನ ವಿದ್ಯುತ್ ಬಿಲ್, ಆಧಾರ್ನೊಂದಿಗೆ ಕಚೇರಿಗೆ
ಭೇಟಿ ನೀಡಿ ಮಾಹಿತಿಯನ್ನು ನಮೂದಿಸುವುದು.
ಕೂಲಿ ನೇಕಾರರು/ ಕೆಲಸಗಾರರು: ಘಟಕದ ಮಾಲಿಕರಿಂದ ಘಟಕದಲ್ಲಿ ಕೂಡ ನೇಯ್ಗೆ ವೃತ್ತಿ ಮಾಡುತ್ತಿರುವ ಬಗ್ಗೆ ದೃಢೀಕರಣ ಪಡೆದು ಕಚೇರಿಗೆ ಭೇಟಿ ನೀಡಿ ಮಾಹಿತಿಯನ್ನು ನಮೂದಿಸುವುದು.
ನೇಕಾರರಿಂದ ಮಾಹಿತಿ ಸ್ವೀಕೃತಿಯಾದ ನಂತರ ಎಎಂಎಸ್ ಸಂಸ್ಥೆ ವತಿಯಿಂದ ಗಣತಿ ಕ್ರಮ ಕೈಗೊಳ್ಳಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಂಯೋಜಕ ಪವನ್ ಕುಮಾರ್ ಮೊ.ಸಂ.:7406691372 ಅಥವಾ ನಗರದ ಕೆಐಎಡಿಬಿ ಅಪೇರಲ್ ಪಾರ್ಕ್ ಬಳಿಯ ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡದ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪನಿರ್ದೇಶಕಿ ಸೌಮ್ಯ.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…
ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…
ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…
ಇಲ್ಲೋರ್ವ ಪಾಪಿ ತಾಯಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದು ಅಮಾನವೀಯತೆ ಮೆರೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ…
Blackjack is one of the most prominent gambling enterprise video games on the planet. It's…
Ставки на спорт UA: советы и стратегии для успеха Ставки на спорт в Украине: основы…