ವಿದ್ಯುತ್ ಲೈನ್ ಸರಿಪಡಿಸುವ ವೇಳೆ ವಿದ್ಯುತ್ ಪ್ರವಹಿಸಿ ಬೆಸ್ಕಾಂ ಸಿಬ್ಬಂದಿ ಸಾವು: ಮೃತ ದೇಹ ಟ್ರಾನ್ಸ್ ಫಾರ್ಮರ್ ಕಂಬದಲ್ಲೇ ನೇತಾಡಿದ ದೃಶ್ಯ ಕಂಡುಬಂದಿದೆ

ಕಳೆದ‌ ದಿನವಷ್ಟೇ ಗೌರಿಬಿದನೂರು ವ್ಯಾಪ್ತಿಯಲ್ಲಿ ಮೂವರು ಬೆಸ್ಕಾಂ ಸಿಬ್ಬಂದಿಯ ಕಾರು ಅಪಘಾತಗೊಂಡು ದಾರುಣವಾಗಿ ಮೂವರು ಮೃತಪಟ್ಟ ಬೆನ್ನಲೇ, ಈಗ ವಿದ್ಯುತ್ ಸರಿಪಡಿಸುವ ವೇಳೆ ವಿದ್ಯುತ್ ಪ್ರವಹಿಸಿ ಮತ್ತೋರ್ವ ಬೆಸ್ಕಾಂ ಸಿಬ್ಬಂದಿ ದಾರುಣವಾಗಿ ವಿದ್ಯುತ್ ಕಂಬದಲ್ಲೇ ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ಸುಮಾರು 10.30 ಗಂಟೆ ಸಮಯದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ವ್ಯಾಪ್ತಿಯ ಮಂಚೇನಹಳ್ಳಿ ತಾಲೂಕಿನ ಬಿಸಲಹಳ್ಳಿ ಗ್ರಾಮದಲ್ಲಿ ದುರಂತ ಸಂಬವಿಸಿದ್ದು, ಘಟನೆಯಲ್ಲಿ ಬೆಸ್ಕಾಂ ಸಿಬ್ಬಂದಿ ಲೈನ್ ಮ್ಯಾನ್ ಉದಯ್(28), ಮೃತ ಯುವಕ ಎಂದು ತಿಳಿದು ಬಂದಿದೆ.

ಮೂಲತಃ ಉದಯ್ ಚಿತ್ರದುರ್ಗ ಕಡೆಯವರು ಎಂದು ತಿಳಿದು ಬಂದಿದ್ದು, ಮಂಚೇನಹಳ್ಳಿ ವ್ಯಾಪ್ತಿಯಲ್ಲಿ ಲೈನ್ ಮ್ಯಾನ್ ಆಗಿ ಕರ್ತವ್ಯವನ್ನು ನಿರ್ವಹಿಸುತ್ತಿದ್ದರು. ಸದ್ಯ ಇಂದು ಟ್ರಾನ್ಸ್ ಫಾರ್ಮರ್ ನಲ್ಲಿ ಲೈನ್ ಜಂಪ್ ಆದ ಹಿನ್ನೆಲೆ ಬಿಸಲಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಟ್ರಾನ್ಸ್ ಫಾರ್ಮ್ ಕಂಬವನ್ನು ಹತ್ತಿ ಲೈನ್ ಸರಿಪಡಿಸುವ ವೇಳೆ ವಿದ್ಯುತ್ ಹರಿದು ದಾರುಣವಾಗಿ ವಿದ್ಯುತ್ ಕಂಬದಲ್ಲಿಯೇ ಸಾವನ್ನಪ್ಪಿದ್ದಾರೆ.

Ramesh Babu

Journalist

Recent Posts

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

24 minutes ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

17 hours ago

ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…

18 hours ago

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

23 hours ago

ಚಿಂತಕರು ಸ್ವಾಮಿ ನಾವು ಚಿಂತಕರು….

ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…

24 hours ago

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

2 days ago