ಕಳೆದ ದಿನವಷ್ಟೇ ಗೌರಿಬಿದನೂರು ವ್ಯಾಪ್ತಿಯಲ್ಲಿ ಮೂವರು ಬೆಸ್ಕಾಂ ಸಿಬ್ಬಂದಿಯ ಕಾರು ಅಪಘಾತಗೊಂಡು ದಾರುಣವಾಗಿ ಮೂವರು ಮೃತಪಟ್ಟ ಬೆನ್ನಲೇ, ಈಗ ವಿದ್ಯುತ್ ಸರಿಪಡಿಸುವ ವೇಳೆ ವಿದ್ಯುತ್ ಪ್ರವಹಿಸಿ ಮತ್ತೋರ್ವ ಬೆಸ್ಕಾಂ ಸಿಬ್ಬಂದಿ ದಾರುಣವಾಗಿ ವಿದ್ಯುತ್ ಕಂಬದಲ್ಲೇ ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ಸುಮಾರು 10.30 ಗಂಟೆ ಸಮಯದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ವ್ಯಾಪ್ತಿಯ ಮಂಚೇನಹಳ್ಳಿ ತಾಲೂಕಿನ ಬಿಸಲಹಳ್ಳಿ ಗ್ರಾಮದಲ್ಲಿ ದುರಂತ ಸಂಬವಿಸಿದ್ದು, ಘಟನೆಯಲ್ಲಿ ಬೆಸ್ಕಾಂ ಸಿಬ್ಬಂದಿ ಲೈನ್ ಮ್ಯಾನ್ ಉದಯ್(28), ಮೃತ ಯುವಕ ಎಂದು ತಿಳಿದು ಬಂದಿದೆ.
ಮೂಲತಃ ಉದಯ್ ಚಿತ್ರದುರ್ಗ ಕಡೆಯವರು ಎಂದು ತಿಳಿದು ಬಂದಿದ್ದು, ಮಂಚೇನಹಳ್ಳಿ ವ್ಯಾಪ್ತಿಯಲ್ಲಿ ಲೈನ್ ಮ್ಯಾನ್ ಆಗಿ ಕರ್ತವ್ಯವನ್ನು ನಿರ್ವಹಿಸುತ್ತಿದ್ದರು. ಸದ್ಯ ಇಂದು ಟ್ರಾನ್ಸ್ ಫಾರ್ಮರ್ ನಲ್ಲಿ ಲೈನ್ ಜಂಪ್ ಆದ ಹಿನ್ನೆಲೆ ಬಿಸಲಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಟ್ರಾನ್ಸ್ ಫಾರ್ಮ್ ಕಂಬವನ್ನು ಹತ್ತಿ ಲೈನ್ ಸರಿಪಡಿಸುವ ವೇಳೆ ವಿದ್ಯುತ್ ಹರಿದು ದಾರುಣವಾಗಿ ವಿದ್ಯುತ್ ಕಂಬದಲ್ಲಿಯೇ ಸಾವನ್ನಪ್ಪಿದ್ದಾರೆ.
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…