ಕಳೆದ ದಿನವಷ್ಟೇ ಗೌರಿಬಿದನೂರು ವ್ಯಾಪ್ತಿಯಲ್ಲಿ ಮೂವರು ಬೆಸ್ಕಾಂ ಸಿಬ್ಬಂದಿಯ ಕಾರು ಅಪಘಾತಗೊಂಡು ದಾರುಣವಾಗಿ ಮೂವರು ಮೃತಪಟ್ಟ ಬೆನ್ನಲೇ, ಈಗ ವಿದ್ಯುತ್ ಸರಿಪಡಿಸುವ ವೇಳೆ ವಿದ್ಯುತ್ ಪ್ರವಹಿಸಿ ಮತ್ತೋರ್ವ ಬೆಸ್ಕಾಂ ಸಿಬ್ಬಂದಿ ದಾರುಣವಾಗಿ ವಿದ್ಯುತ್ ಕಂಬದಲ್ಲೇ ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ಸುಮಾರು 10.30 ಗಂಟೆ ಸಮಯದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ವ್ಯಾಪ್ತಿಯ ಮಂಚೇನಹಳ್ಳಿ ತಾಲೂಕಿನ ಬಿಸಲಹಳ್ಳಿ ಗ್ರಾಮದಲ್ಲಿ ದುರಂತ ಸಂಬವಿಸಿದ್ದು, ಘಟನೆಯಲ್ಲಿ ಬೆಸ್ಕಾಂ ಸಿಬ್ಬಂದಿ ಲೈನ್ ಮ್ಯಾನ್ ಉದಯ್(28), ಮೃತ ಯುವಕ ಎಂದು ತಿಳಿದು ಬಂದಿದೆ.
ಮೂಲತಃ ಉದಯ್ ಚಿತ್ರದುರ್ಗ ಕಡೆಯವರು ಎಂದು ತಿಳಿದು ಬಂದಿದ್ದು, ಮಂಚೇನಹಳ್ಳಿ ವ್ಯಾಪ್ತಿಯಲ್ಲಿ ಲೈನ್ ಮ್ಯಾನ್ ಆಗಿ ಕರ್ತವ್ಯವನ್ನು ನಿರ್ವಹಿಸುತ್ತಿದ್ದರು. ಸದ್ಯ ಇಂದು ಟ್ರಾನ್ಸ್ ಫಾರ್ಮರ್ ನಲ್ಲಿ ಲೈನ್ ಜಂಪ್ ಆದ ಹಿನ್ನೆಲೆ ಬಿಸಲಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಟ್ರಾನ್ಸ್ ಫಾರ್ಮ್ ಕಂಬವನ್ನು ಹತ್ತಿ ಲೈನ್ ಸರಿಪಡಿಸುವ ವೇಳೆ ವಿದ್ಯುತ್ ಹರಿದು ದಾರುಣವಾಗಿ ವಿದ್ಯುತ್ ಕಂಬದಲ್ಲಿಯೇ ಸಾವನ್ನಪ್ಪಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…