ಕಳೆದ ದಿನವಷ್ಟೇ ಗೌರಿಬಿದನೂರು ವ್ಯಾಪ್ತಿಯಲ್ಲಿ ಮೂವರು ಬೆಸ್ಕಾಂ ಸಿಬ್ಬಂದಿಯ ಕಾರು ಅಪಘಾತಗೊಂಡು ದಾರುಣವಾಗಿ ಮೂವರು ಮೃತಪಟ್ಟ ಬೆನ್ನಲೇ, ಈಗ ವಿದ್ಯುತ್ ಸರಿಪಡಿಸುವ ವೇಳೆ ವಿದ್ಯುತ್ ಪ್ರವಹಿಸಿ ಮತ್ತೋರ್ವ ಬೆಸ್ಕಾಂ ಸಿಬ್ಬಂದಿ ದಾರುಣವಾಗಿ ವಿದ್ಯುತ್ ಕಂಬದಲ್ಲೇ ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ಸುಮಾರು 10.30 ಗಂಟೆ ಸಮಯದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ವ್ಯಾಪ್ತಿಯ ಮಂಚೇನಹಳ್ಳಿ ತಾಲೂಕಿನ ಬಿಸಲಹಳ್ಳಿ ಗ್ರಾಮದಲ್ಲಿ ದುರಂತ ಸಂಬವಿಸಿದ್ದು, ಘಟನೆಯಲ್ಲಿ ಬೆಸ್ಕಾಂ ಸಿಬ್ಬಂದಿ ಲೈನ್ ಮ್ಯಾನ್ ಉದಯ್(28), ಮೃತ ಯುವಕ ಎಂದು ತಿಳಿದು ಬಂದಿದೆ.
ಮೂಲತಃ ಉದಯ್ ಚಿತ್ರದುರ್ಗ ಕಡೆಯವರು ಎಂದು ತಿಳಿದು ಬಂದಿದ್ದು, ಮಂಚೇನಹಳ್ಳಿ ವ್ಯಾಪ್ತಿಯಲ್ಲಿ ಲೈನ್ ಮ್ಯಾನ್ ಆಗಿ ಕರ್ತವ್ಯವನ್ನು ನಿರ್ವಹಿಸುತ್ತಿದ್ದರು. ಸದ್ಯ ಇಂದು ಟ್ರಾನ್ಸ್ ಫಾರ್ಮರ್ ನಲ್ಲಿ ಲೈನ್ ಜಂಪ್ ಆದ ಹಿನ್ನೆಲೆ ಬಿಸಲಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಟ್ರಾನ್ಸ್ ಫಾರ್ಮ್ ಕಂಬವನ್ನು ಹತ್ತಿ ಲೈನ್ ಸರಿಪಡಿಸುವ ವೇಳೆ ವಿದ್ಯುತ್ ಹರಿದು ದಾರುಣವಾಗಿ ವಿದ್ಯುತ್ ಕಂಬದಲ್ಲಿಯೇ ಸಾವನ್ನಪ್ಪಿದ್ದಾರೆ.
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…