ಕಳೆದ ದಿನವಷ್ಟೇ ಗೌರಿಬಿದನೂರು ವ್ಯಾಪ್ತಿಯಲ್ಲಿ ಮೂವರು ಬೆಸ್ಕಾಂ ಸಿಬ್ಬಂದಿಯ ಕಾರು ಅಪಘಾತಗೊಂಡು ದಾರುಣವಾಗಿ ಮೂವರು ಮೃತಪಟ್ಟ ಬೆನ್ನಲೇ, ಈಗ ವಿದ್ಯುತ್ ಸರಿಪಡಿಸುವ ವೇಳೆ ವಿದ್ಯುತ್ ಪ್ರವಹಿಸಿ ಮತ್ತೋರ್ವ ಬೆಸ್ಕಾಂ ಸಿಬ್ಬಂದಿ ದಾರುಣವಾಗಿ ವಿದ್ಯುತ್ ಕಂಬದಲ್ಲೇ ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ಸುಮಾರು 10.30 ಗಂಟೆ ಸಮಯದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ವ್ಯಾಪ್ತಿಯ ಮಂಚೇನಹಳ್ಳಿ ತಾಲೂಕಿನ ಬಿಸಲಹಳ್ಳಿ ಗ್ರಾಮದಲ್ಲಿ ದುರಂತ ಸಂಬವಿಸಿದ್ದು, ಘಟನೆಯಲ್ಲಿ ಬೆಸ್ಕಾಂ ಸಿಬ್ಬಂದಿ ಲೈನ್ ಮ್ಯಾನ್ ಉದಯ್(28), ಮೃತ ಯುವಕ ಎಂದು ತಿಳಿದು ಬಂದಿದೆ.
ಮೂಲತಃ ಉದಯ್ ಚಿತ್ರದುರ್ಗ ಕಡೆಯವರು ಎಂದು ತಿಳಿದು ಬಂದಿದ್ದು, ಮಂಚೇನಹಳ್ಳಿ ವ್ಯಾಪ್ತಿಯಲ್ಲಿ ಲೈನ್ ಮ್ಯಾನ್ ಆಗಿ ಕರ್ತವ್ಯವನ್ನು ನಿರ್ವಹಿಸುತ್ತಿದ್ದರು. ಸದ್ಯ ಇಂದು ಟ್ರಾನ್ಸ್ ಫಾರ್ಮರ್ ನಲ್ಲಿ ಲೈನ್ ಜಂಪ್ ಆದ ಹಿನ್ನೆಲೆ ಬಿಸಲಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಟ್ರಾನ್ಸ್ ಫಾರ್ಮ್ ಕಂಬವನ್ನು ಹತ್ತಿ ಲೈನ್ ಸರಿಪಡಿಸುವ ವೇಳೆ ವಿದ್ಯುತ್ ಹರಿದು ದಾರುಣವಾಗಿ ವಿದ್ಯುತ್ ಕಂಬದಲ್ಲಿಯೇ ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…