ಚಿಂತಾಮಣಿ ತಾಲೂಕಿನ ಕೈವಾರ ಗ್ರಾಮದಲ್ಲಿ ಮನೆಯೊಂದರಲ್ಲಿ ಅಗ್ನಿ ಅನಾಹುತ ಸಂಭವಿಸಿದೆ. ಗ್ರಾಮದ ನಿವಾಸಿ ಮಂಜುನಾಥ್ ಅವರಿಗೆ ಸೇರಿದ ಮನೆ ಶಾರ್ಟ್ ಸರ್ಕ್ಯೂಟ್ನಿಂದ ತೀವ್ರ ಬೆಂಕಿಗೆ ಆಹುತಿಯಾಗಿದೆ. ಘಟನೆ ಸಂಭವಿಸಿದಾಗ ಮನೆಯಲ್ಲಿ ಇಲ್ಲದ ಕಾರಣ ದೊಡ್ಡ ಪ್ರಾಣಾಪಾಯ ತಪ್ಪಿದರೂ, ಅನೇಕ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ.
ಮಂಜುನಾಥ್ ಅವರ ಮಗನ ಅನಾರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ಹೋಗಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ತಕ್ಷಣವೇ ಬೆಂಕಿ ವ್ಯಾಪಿಸಿ ಸಂಪೂರ್ಣ ಮನೆಯನ್ನೇ ಆವರಿಸಿತು. ಸುಮಾರು ₹25 ಲಕ್ಷ ಮೌಲ್ಯದ ಗೃಹೋಪಯೋಗಿ ವಸ್ತುಗಳು, ಎಲೆಕ್ಟ್ರಾನಿಕ್ ಸಾಧನಗಳು ಹಾಗೂ ಇತರ ಅಮೂಲ್ಯ ವಸ್ತುಗಳು ಸುಟ್ಟು ಕರಕಲಾಗಿವೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿತು. ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮಂಜುನಾಥ್ ಕುಟುಂಬ ಆರ್ಥಿಕವಾಗಿ ನಷ್ಟಕ್ಕೆ ಒಳಗಾಗಿದ್ದು, ಈ ಕುರಿತು ಸರ್ಕಾರದಿಂದ ಸಹಾಯ ನೀಡಬೇಕೆಂದು ಸ್ಥಳೀಯರು ಆಗ್ರಹಿಸುತ್ತಿದ್ದಾರೆ.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…