ಚಿಂತಾಮಣಿ ತಾಲೂಕಿನ ಕೈವಾರ ಗ್ರಾಮದಲ್ಲಿ ಮನೆಯೊಂದರಲ್ಲಿ ಅಗ್ನಿ ಅನಾಹುತ ಸಂಭವಿಸಿದೆ. ಗ್ರಾಮದ ನಿವಾಸಿ ಮಂಜುನಾಥ್ ಅವರಿಗೆ ಸೇರಿದ ಮನೆ ಶಾರ್ಟ್ ಸರ್ಕ್ಯೂಟ್ನಿಂದ ತೀವ್ರ ಬೆಂಕಿಗೆ ಆಹುತಿಯಾಗಿದೆ. ಘಟನೆ ಸಂಭವಿಸಿದಾಗ ಮನೆಯಲ್ಲಿ ಇಲ್ಲದ ಕಾರಣ ದೊಡ್ಡ ಪ್ರಾಣಾಪಾಯ ತಪ್ಪಿದರೂ, ಅನೇಕ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ.
ಮಂಜುನಾಥ್ ಅವರ ಮಗನ ಅನಾರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ಹೋಗಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ತಕ್ಷಣವೇ ಬೆಂಕಿ ವ್ಯಾಪಿಸಿ ಸಂಪೂರ್ಣ ಮನೆಯನ್ನೇ ಆವರಿಸಿತು. ಸುಮಾರು ₹25 ಲಕ್ಷ ಮೌಲ್ಯದ ಗೃಹೋಪಯೋಗಿ ವಸ್ತುಗಳು, ಎಲೆಕ್ಟ್ರಾನಿಕ್ ಸಾಧನಗಳು ಹಾಗೂ ಇತರ ಅಮೂಲ್ಯ ವಸ್ತುಗಳು ಸುಟ್ಟು ಕರಕಲಾಗಿವೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿತು. ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮಂಜುನಾಥ್ ಕುಟುಂಬ ಆರ್ಥಿಕವಾಗಿ ನಷ್ಟಕ್ಕೆ ಒಳಗಾಗಿದ್ದು, ಈ ಕುರಿತು ಸರ್ಕಾರದಿಂದ ಸಹಾಯ ನೀಡಬೇಕೆಂದು ಸ್ಥಳೀಯರು ಆಗ್ರಹಿಸುತ್ತಿದ್ದಾರೆ.
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…