ವಿದ್ಯುತ್ ಸ್ಪರ್ಶಿಸಿ ಗೃಹಿಣಿಯ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಪಾಲ್ ಪಾಲ್ ದಿನ್ನೆ ಗ್ರಾಮದಲ್ಲಿ ಶನಿವಾರ ಸಂಜೆ ಸುಮಾರು 7 ಗಂಟೆ ಸಮಯದಲ್ಲಿ ನಡೆದಿದೆ.
ಮನುಶ್ರೀ (29), ಸಾವನ್ನಪ್ಪಿರುವ ಗೃಹಿಣಿ, ಹತ್ತು ವರ್ಷಗಳ ಹಿಂದೆ ಸಿಂಗನಾಯಕನಹಳ್ಳಿಯ ಮನುಶ್ರೀ ಪಾಲ್ ಪಾಲ್ ದಿನ್ನೆ ಗ್ರಾಮದ ಮೋಹನ್ ಕುಮಾರ್ (35) ಗೆ ಕೊಟ್ಟು ಮದುವೆ ಮಾಡಿದ್ದ ಮನುಶ್ರೀ ತಂದೆ ಪ್ರಕಾಶ್, ಇವರ ದಾಂಪತ್ಯಕ್ಕೆ ಒಂದು ಗಂಡು ಮಗು ಸಹ ಇದೆ.
ನಿನ್ನೆ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಗಂಡನ ಮನೆಯವರ ಪ್ರಕಾರ ಜಾನುವಾರುಗಳಿಗೆ ಮಷಿನ್ ನಲ್ಲಿ ಮೇವು ಕಟ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ. ಆದರೆ ಮೃತಳ ಕುಟುಂಬಸ್ಥರು ಕೊಲೆ ಆರೋಪ ಮಾಡಿದ್ದು, ವರದಕ್ಷಿಣೆ ಕಾರಣಕ್ಕೆ ಕಿರುಕುಳ ಕೊಟ್ಟು ಕೊಲೆ ಮಾಡಿರುವುದಾಗಿ ಆರೋಪ ಮಾಡಿದ್ದಾರೆ.
(ಮನುಶ್ರೀ-ಮೋಹನ್ಕುಮಾರ್ ದಂಪತಿ)
ಈ ಆರೋಪದ ಮೇಲೆ ಮನುಶ್ರೀ ಗಂಡನಾದ ಮೋಹನ್ ಕುಮಾರ್ ನನ್ನು ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.
ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…