Categories: ಕೋಲಾರ

ವಿದ್ಯುತ್‌, ಹಾಲಿನ ದರ ಏರಿಕೆ: ರೈತ ಸಂಘದಿಂದ ಖಂಡನೆ

ಕೋಲಾರ: ಹಾಲು, ವಿದ್ಯುತ್ ದರ ಹೆಚ್ಚಳ ಮಾಡಿ ಯುಗಾಧಿ ಮುನ್ನವೇ ಬೇವು ನೀಡಿರುವ ಸರ್ಕಾರದ ರೈತ ವಿರೋಧಿ ಬೆಲೆ ಏರಿಕೆ ವಿರುದ್ದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಅರಣ್ಯ ಉದ್ಯಾನವನದಲ್ಲಿ ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ಅವರು, ಧರ ಹೆಚ್ಚಳಕ್ಕೆ ಅನುಗುಣವಾಗಿ ಆದಾಯವು ಹೆಚ್ಚಾದರೆ ಜನ ಹೆಚ್ಚು ತಲೆ ಕೆಡಿಸಿಕೊಳ್ಳುವುದಿಲ್ಲ. ಆದರೆ ದರಗಳು ಏರಿಕೆಯಾಗಿ ಆದಾಯ ಅಷ್ಟೇ ಇದ್ದರೆ, ಬಡ, ಮಧ್ಯದ ವರ್ಗದವರಿಗೆ ಕಂಡಿತ ಹೊರೆಯಾಗಲಿದೆ. ಸರ್ಕಾರಗಳು ದರ ಏರಿಕೆಯ ಸಂದರ್ಭದಲ್ಲಿ ಬಡವರ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿರಿಸಿಕೊಂಡು ತೀರ್ಮಾನ ತೆಗೆದುಕೊಳ್ಳುವುದು ಬಿಟ್ಟು, ಉಚಿತ ಭಾಗ್ಯಗಳಲ್ಲಿ ಹಣ ಒದಗಿಸಲು ಬಡವರ ಮೇಲೆ ಬೆಲೆ ಏರಿಕೆಯ ದಬ್ಬಾಳಿಕೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೇವು ಬೆಲ್ಲ ಹಬ್ಬ ಯುಗಾಧಿ ಆಚರಣೆಗೆ ಸಜ್ಜಾಗುತ್ತಿರುವ ರಾಜ್ಯದ ಜನರಿಗೆ ಹಬ್ಬಕ್ಕೆ ಮುನ್ನವೆ ಹಾಲು ಹಾಗೂ ವಿದ್ಯುತ್ ದರ ಏರಿಕೆಯ ಹೆಸರಿನಲ್ಲಿ ಬರೀ ಕಹಿಯ ಅನುಭವವಾಗಿದೆ. ಸಾಗಣೆ ಸಂಸ್ಕರಣೆ ಹಾಗೂ ವೇತನದಂತಹ ವೆಚ್ಚಗಳು ಅಧಿಕವಾಗಿರುವ ಕಾರಣವನ್ನು ನೀಡಿ ಲೀಟರ್ ಹಾಲಿನ ದರವನ್ನು 4 ರೂ. ನಷ್ಟು ಏರಿಕೆ ಮಾಡುವ ಸಂಬಂಧ ಸರ್ಕಾರ ಘೋಷಣೆ ಮಾಡಿದ್ದರೆ, ನಿಶ್ಚಿತಾ ಶುಲ್ಕ ಹೆಸರಿನಲ್ಲಿ ವಿದ್ಯುತ್ ಕೂಡ ದುಬಾರಿ ಮಾಡಿ ಬಡವರ ಬದುಕನ್ನು ಬೀದಿಗೆ ತಳ್ಳುತ್ತಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು.

ತಾ.ಅಧ್ಯಕ್ಷ ಕದರಿನತ್ತ ಅಪ್ಪೋಜಿರಾವ್ ಮಾತನಾಡಿ, ಪ್ರತಿ ಬೇಸಿಗೆಯಲ್ಲೂ ರೈತರ ಹೆಸರಿನಲ್ಲಿ ಹಾಲಿನ ಬೆಲೆಯನ್ನು ಏರಿಕೆ ಮಾಡುತ್ತೇವೆಂದು ಭರವಸೆ ನೀಡಿ 1 ಅಥವಾ 2 ರೂ. ಏರಿಕೆ ಮಾಡಿ ನಂತರ ಗ್ರಾಹಕರಿಗೆ ಹೊರೆಯಾಗುವಂತೆ ಮೊಸರು ಹಾಲಿನ ಉತ್ಪನ್ನಗಳಿಗೆ ಪ್ರತಿ ಲೀಟರ್ ಮೇಲೆ 4 ರೂ ಏರಿಕೆ ಮಾಡಿ ಹಗಲು ದರೋಡೆ ರೈತರ ಹೆಸರಿನಲ್ಲಿ ಒಕ್ಕೂಟ ನಡೆಸುವುದನ್ನು ಬಿಟ್ಟು ಏರಿಕೆಯಾಗಿರುವ ಪ್ರತಿ ಲೀಟರ್ ಹಾಲಿನ 4 ರೂಪಾಯಿ ಮೊತ್ತವನ್ನು ರೈತರಿಗೆ ನೀಡುವ ಮುಖಾಂತರ ಮಾನವೀಯತೆ ತೋರಲಿ ಎಂದು ಸಲಹೆ ನೀಡಿದರು.

ದುಬಾರಿಯಾಗಿರುವ ಕೃಷಿ ಕ್ಷೇತ್ರದಲ್ಲಿ ಕೃಷಿಯೇ ಬೇಡ ಎಂದು ರೈತರು ನಿರ್ಧಾರ ಮಾಡಿರುವಾಗ ಈಗ ಗುಬ್ಬಚ್ಚಿ ಮೇಲೆ ಬ್ರಹ್ಮಾಸ್ತ್ರ ಎಂಬಂತೆ ಗುಣಮಟ್ಟದ 10 ತಾಸು ವಿದ್ಯುತ್ ನೀಡಲು ಯೋಗ್ಯತೆ ಇಲ್ಲದ ಇಂಧನ ಸಚಿವರು ಏಕಾಏಕಿ ವಿದ್ಯುತ್ ಬೆಲೆ ಏರಿಕೆ ಮಾಡಿ, ರೈತರ ಮರಣ ಶಾಸನ ಬರೆಯುವ ಜೊತೆಗೆ ಹೊಸದಾಗಿ ಕೊಳವೆಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಸರ್ಕಾರದ ಸಬ್ಸಿಡಿ ಹಿಂಪಡೆದು ರೈತರಿಗೆ ಲಕ್ಷ ಲಕ್ಷ ತಲೆ ಮೇಲೆ ಹಾಕುವ ಬದಲು ಸರ್ಕಾರದಿಂದಲೇ ಉಚಿತ ವಿದ್ಯುತ್ ಸಂಪರ್ಕ ನೀಡುವ ಯೋಜನೆಯನ್ನು ಜಾರಿ ಮಾಡಲಿ ಎಂದು ಒತ್ತಾಯಿಸಿದರು.

ಒಂದುವಾರದಲ್ಲಿ ರೈತರಿಗೆ ಗ್ರಾಹಕರಿಗೆ ಹೊರೆಯಾಗುವ ಬೆಲೆ ಏರಿಕೆ ನಿಯಂತ್ರಣ ಮಾಡಿ ರೈತರ ಜನ ಸಾಮಾನ್ಯರ ಕೂಲಿ ಕಾರ್ಮಿಕರ ರಕ್ಷಣೆ ಮಾಡದೇ ಇದ್ದರೆ, ಲಕ್ಷಾಂತರ ರೈತರು, ಜಾನುವಾರುಗಳು, ಸಮೇತ ಮುಖ್ಯ ಮಂತ್ರಿಗಳ ಮನೆ ಮುತ್ತಿಗೆ ಹಾಕುವ ಎಚ್ಚರಿಕೆಯ ಜೊತೆಗೆ ಯುಗಾದಿ ಹಬ್ಬಕ್ಕೆ ಸಿಹಿಯನ್ನು ಕೊಡಿ, ಕಹಿಯನ್ನು ಅಲ್ಲ ಎಂದು ಸರ್ಕಾರಗಳಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ, ಕಾಮಸಮುದ್ರ ಹೋಬಳಿ ಅಧ್ಯಕ್ಷ ಮುನಿಕೃಷ್ಣ, ಬಾಬುರಾವ್, ಮಂಜುನಾಥರಾವ್, ಸಂತೋಷ್, ಶ್ರೀರಾಮರೆಡ್ಡಿ, ಗುಲ್ಲಟ್ಟಿ, ಮುನಿರಾಜು, ವಿಶ್ವ, ಗಿರೀಶ್, ರಾಜು, ಮುಂತಾದವರು ಇದ್ದರು.

Ramesh Babu

Journalist

Recent Posts

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

13 hours ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

16 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

16 hours ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

1 day ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

1 day ago