Categories: ರಾಜ್ಯ

ವಿಧಾನಸಭಾ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ರಿಲೀಸ್

2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಕ್ಷ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಪಡಿತರದಲ್ಲಿ 5 ಕೆ.ಜಿ ಅಕ್ಕಿ ಜೊತೆ ಇನ್ನೂ 5 ಕೆ‌.ಜಿ ಸಿರಿಧಾನ್ಯ ವಿತರಣೆ ವಿತರಣೆ ಮಾಡುವುದಾಗಿ ಹಾಗೂ ಬಿಪಿಎಲ್ ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್ ನಂದಿನಿ ಹಾಲು ನೀಡುವ ಭರವಸೆಯನ್ನು ನೀಡಿದೆ.

ಬೆಂಗಳೂರಿನ ಶಾಂಗ್ರಿ ಲಾ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು, ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು

ಬಿಜೆಪಿ ಪ್ರಣಾಳಿಕೆಯ ಪ್ರಮುಖ 10 ಭರವಸೆಗಳು

1. ಬಿಪಿಎಲ್‌ ಕಾರ್ಡ್‌ದಾರರಿಗೆ ವರ್ಷಕ್ಕೆ ಉಚಿತ 3 ಗ್ಯಾಸ್‌ ಸಿಲಿಂಡರ್‌ ವಿತರಣೆ, ಯುಗಾದಿ, ಗಣೇಶ ಚತುರ್ಥಿ, ದೀಪಾವಳಿ ವೇಳೆ ಉಚಿತ ಗ್ಯಾಸ್‌ ಸಿಲಿಂಡರ್‌ ನೀಡುವ ಗ್ಯಾರಂಟಿ.

2. ಪೋಷಣ್ ಯೋಜನೆ ಮೂಲಕ ಬಿಪಿಎಲ್‌ ಕುಟುಂಬಗಳಿಗೆ ಪ್ರತಿ ದಿನ ಅರ್ಧ ಲೀಟರ್‌ ನಂದಿನಿ ಹಾಲನ್ನು ವಿತರಣೆ. ಇದರ ಜೊತೆ ಬಿಪಿಎಲ್‌ ಕಾರ್ಡ್‌ ಹೊಂದಿರುವ ಕುಟುಂಬಗಳಿಗೆ ಪ್ರತಿ ತಿಂಗಳು ಶ್ರೀ ಅನ್ನ ಒಳಗೊಂಡ 5 ಕೆಜಿ ಸಿರಿಧಾನ್ಯದ ಪಡಿತರ ಕಿಟ್‌ ವಿತರಣೆ.

3. ಕರ್ನಾಟಕದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೊಳಿಸುವ ಭರವಸೆ. ಎನ್‌ಆರ್‌ಸಿ ನೋಂದಣಿ ಪ್ರಕ್ರಿಯೆ ಚುರುಕುಗೊಳಿಸಿ, ಎಲ್ಲ ಅಕ್ರಮ ವಲಸಿಗರ ಗಡಿಪಾರು ಮಾಡುತ್ತೇವೆ ಎಂಬ ಭರವಸೆ.

4. ಒನಕೆ ಓಬವ್ವ ಸಾಮಾಜಿಕ ನ್ಯಾಯ ನಿಧಿ – ಈ ಯೋಜನೆಯ ಮೂಲಕ ಎಸ್‌ಸಿ, ಎಸ್‌ಟಿ ಸಮುದಾಯದ ಮಹಿಳೆಯರು ಐದು ವರ್ಷಗಳ ಅವಧಿಗೆ ಮಾಡುವ ಸ್ಥಿರ ಠೇವಣಿಗಳ ಮೇಲೆ 10 ಸಾವಿರ ರೂ.ವರೆಗೂ ಫಿಕ್ಸಡ್‌ ಠೇವಣಿ ಭರವಸೆ.

5. ಕಡಿಮೆ ದರದಲ್ಲಿ ಗುಣಮಟ್ಟದ ಮತ್ತು ಆರೋಗ್ಯಕರ ಆಹಾರ ಒದಗಿಸಲು ರಾಜ್ಯದ ಪ್ರತಿ ಮಹಾನಗರ ಪಾಲಿಕೆಯ ವಾರ್ಡ್‌ಗಳಲ್ಲಿ ‘ಅಟಲ್ ಆಹಾರ ಕೇಂದ್ರ’ದ ಸ್ಥಾಪನೆಯ ಭರವಸೆ.

6. ಮುಂದಿನ ಪೀಳಿಗೆಗಾಗಿ ಬೆಂಗಳೂರನ್ನು ಅಭಿವೃದ್ಧಿಪಡಿಸಿ, ‘ರಾಜ್ಯ ರಾಜಧಾನಿ ಪ್ರದೇಶ’ ಎಂದು ಘೋಷಣೆ. ಬೆಂಗಳೂರನ್ನು ಡಿಜಿಟಲ್ ಇನ್ನೋವೇಶನ್‌ನ ಜಾಗತಿಕ ಕೇಂದ್ರವಾಗಿ ರೂಪಿಸಲು ಪೂರಕ ಪರಿಸರ ವ್ಯವಸ್ಥೆ ಕಲ್ಪಿಸುತ್ತೇವೆ ಎಂಬ ಭರವಸೆ.

7. ಕರ್ನಾಟಕವನ್ನು ಎಲೆಕ್ಟ್ರಾನಿಕ್ ವಾಹನಗಳ ಪ್ರಮುಖ ಕೇಂದ್ರವನ್ನಾಗಿ ರೂಪಿಸುತ್ತೇವೆ. ಪೂರಕವಾಗಿ, ಚಾರ್ಜಿಂಗ್ ಸ್ಟೇಷನ್‌ಗಳ ಸ್ಥಾಪನೆ, 1,000 ಸ್ಟಾರ್ಟ್ ಅಪ್‌ಗಳಿಗೆ ಪ್ರೋತ್ಸಾಹ ನೀಡುವುದಾಗಿ ಹೇಳಿರುವ ಬಿಜೆಪಿ, ಬೆಂಗಳೂರಿನ ಹೊರವಲಯದಲ್ಲಿ ‘ಇಬಿ ಸಿಟಿ’ ಅಭಿವೃದ್ಧಿ ಮಾಡುತ್ತೇವೆ ಎಂದು ಹೇಳಿದೆ.

8. 30 ಸಾವಿರ ಕೋಟಿ ರೂ. ಮೊತ್ತದ ಕೆ-ಅಗ್ರಿ ಫಂಡ್‌: ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಕಿರು ಶೀತಲೀಕರಣ ಸೌಲಭ್ಯಗಳು ಮತ್ತು ಕೃಷಿ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ಈ ಫಂಡ್‌ನ ಸ್ಥಾಪನೆ. ಎಪಿಎಂಸಿಗಳ ಆಧುನೀಕರಣ ಮತ್ತು ಡಿಜಿಟಲೀಕರಣದ ಭರವಸೆ. 5 ಹೊಸ ಕೃಷಿ ಆಧಾರಿತ ಕೈಗಾರಿಕಾ ಕ್ಲಸ್ಟರ್‌ಗಳು ಮತ್ತು 3 ಹೊಸ ಆಹಾರ ಸಂಸ್ಕರಣಾ ಪಾರ್ಕ್‌ಗಳನ್ನು ಸ್ಥಾಪಿಸುವ ಭರವಸೆ.

9. ಟೂರಿಸಂ ಸರ್ಕ್ಯೂಟ್‌ಗಳ ಅಭಿವೃದ್ಧಿಗೆ 1,500 ಕೋಟಿ ರೂ. ವಿನಿಯೋಗ. ಇದರ ಅಡಿಯಲ್ಲಿ ಕಲ್ಯಾಣ ಸರ್ಕ್ಯೂಟ್‌, ಬನವಾಸಿ ಸರ್ಕ್ಯೂಟ್, ಪರಶುರಾಮ ಸರ್ಕ್ಯೂಟ್, ಕಾವೇರಿ ಸರ್ಕ್ಯೂಟ್, ಗಾಣಗಾಪುರ ಕಾರಿಡಾರ್‌ ಅಭಿವೃದ್ಧಿಯ ಭರವಸೆ.

10. ಹಾಲು ಉತ್ಪಾದಕರಿಗೆ ನೀಡುವ ಪ್ರೋತ್ಸಾಹ ಧನವನ್ನು ಲೀಟರ್‌ಗೆ 5 ರೂ.ನಿಂದ 7 ರೂ.ಗೆ ಏರಿಕೆಯ ಭರವಸೆ ನೀಡಲಾಗಿದೆ.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

3 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

5 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

5 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

5 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

10 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

11 hours ago