Categories: ರಾಜ್ಯ

ವಿಧಾನಸಭಾ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ರಿಲೀಸ್

2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಕ್ಷ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಪಡಿತರದಲ್ಲಿ 5 ಕೆ.ಜಿ ಅಕ್ಕಿ ಜೊತೆ ಇನ್ನೂ 5 ಕೆ‌.ಜಿ ಸಿರಿಧಾನ್ಯ ವಿತರಣೆ ವಿತರಣೆ ಮಾಡುವುದಾಗಿ ಹಾಗೂ ಬಿಪಿಎಲ್ ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್ ನಂದಿನಿ ಹಾಲು ನೀಡುವ ಭರವಸೆಯನ್ನು ನೀಡಿದೆ.

ಬೆಂಗಳೂರಿನ ಶಾಂಗ್ರಿ ಲಾ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು, ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು

ಬಿಜೆಪಿ ಪ್ರಣಾಳಿಕೆಯ ಪ್ರಮುಖ 10 ಭರವಸೆಗಳು

1. ಬಿಪಿಎಲ್‌ ಕಾರ್ಡ್‌ದಾರರಿಗೆ ವರ್ಷಕ್ಕೆ ಉಚಿತ 3 ಗ್ಯಾಸ್‌ ಸಿಲಿಂಡರ್‌ ವಿತರಣೆ, ಯುಗಾದಿ, ಗಣೇಶ ಚತುರ್ಥಿ, ದೀಪಾವಳಿ ವೇಳೆ ಉಚಿತ ಗ್ಯಾಸ್‌ ಸಿಲಿಂಡರ್‌ ನೀಡುವ ಗ್ಯಾರಂಟಿ.

2. ಪೋಷಣ್ ಯೋಜನೆ ಮೂಲಕ ಬಿಪಿಎಲ್‌ ಕುಟುಂಬಗಳಿಗೆ ಪ್ರತಿ ದಿನ ಅರ್ಧ ಲೀಟರ್‌ ನಂದಿನಿ ಹಾಲನ್ನು ವಿತರಣೆ. ಇದರ ಜೊತೆ ಬಿಪಿಎಲ್‌ ಕಾರ್ಡ್‌ ಹೊಂದಿರುವ ಕುಟುಂಬಗಳಿಗೆ ಪ್ರತಿ ತಿಂಗಳು ಶ್ರೀ ಅನ್ನ ಒಳಗೊಂಡ 5 ಕೆಜಿ ಸಿರಿಧಾನ್ಯದ ಪಡಿತರ ಕಿಟ್‌ ವಿತರಣೆ.

3. ಕರ್ನಾಟಕದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೊಳಿಸುವ ಭರವಸೆ. ಎನ್‌ಆರ್‌ಸಿ ನೋಂದಣಿ ಪ್ರಕ್ರಿಯೆ ಚುರುಕುಗೊಳಿಸಿ, ಎಲ್ಲ ಅಕ್ರಮ ವಲಸಿಗರ ಗಡಿಪಾರು ಮಾಡುತ್ತೇವೆ ಎಂಬ ಭರವಸೆ.

4. ಒನಕೆ ಓಬವ್ವ ಸಾಮಾಜಿಕ ನ್ಯಾಯ ನಿಧಿ – ಈ ಯೋಜನೆಯ ಮೂಲಕ ಎಸ್‌ಸಿ, ಎಸ್‌ಟಿ ಸಮುದಾಯದ ಮಹಿಳೆಯರು ಐದು ವರ್ಷಗಳ ಅವಧಿಗೆ ಮಾಡುವ ಸ್ಥಿರ ಠೇವಣಿಗಳ ಮೇಲೆ 10 ಸಾವಿರ ರೂ.ವರೆಗೂ ಫಿಕ್ಸಡ್‌ ಠೇವಣಿ ಭರವಸೆ.

5. ಕಡಿಮೆ ದರದಲ್ಲಿ ಗುಣಮಟ್ಟದ ಮತ್ತು ಆರೋಗ್ಯಕರ ಆಹಾರ ಒದಗಿಸಲು ರಾಜ್ಯದ ಪ್ರತಿ ಮಹಾನಗರ ಪಾಲಿಕೆಯ ವಾರ್ಡ್‌ಗಳಲ್ಲಿ ‘ಅಟಲ್ ಆಹಾರ ಕೇಂದ್ರ’ದ ಸ್ಥಾಪನೆಯ ಭರವಸೆ.

6. ಮುಂದಿನ ಪೀಳಿಗೆಗಾಗಿ ಬೆಂಗಳೂರನ್ನು ಅಭಿವೃದ್ಧಿಪಡಿಸಿ, ‘ರಾಜ್ಯ ರಾಜಧಾನಿ ಪ್ರದೇಶ’ ಎಂದು ಘೋಷಣೆ. ಬೆಂಗಳೂರನ್ನು ಡಿಜಿಟಲ್ ಇನ್ನೋವೇಶನ್‌ನ ಜಾಗತಿಕ ಕೇಂದ್ರವಾಗಿ ರೂಪಿಸಲು ಪೂರಕ ಪರಿಸರ ವ್ಯವಸ್ಥೆ ಕಲ್ಪಿಸುತ್ತೇವೆ ಎಂಬ ಭರವಸೆ.

7. ಕರ್ನಾಟಕವನ್ನು ಎಲೆಕ್ಟ್ರಾನಿಕ್ ವಾಹನಗಳ ಪ್ರಮುಖ ಕೇಂದ್ರವನ್ನಾಗಿ ರೂಪಿಸುತ್ತೇವೆ. ಪೂರಕವಾಗಿ, ಚಾರ್ಜಿಂಗ್ ಸ್ಟೇಷನ್‌ಗಳ ಸ್ಥಾಪನೆ, 1,000 ಸ್ಟಾರ್ಟ್ ಅಪ್‌ಗಳಿಗೆ ಪ್ರೋತ್ಸಾಹ ನೀಡುವುದಾಗಿ ಹೇಳಿರುವ ಬಿಜೆಪಿ, ಬೆಂಗಳೂರಿನ ಹೊರವಲಯದಲ್ಲಿ ‘ಇಬಿ ಸಿಟಿ’ ಅಭಿವೃದ್ಧಿ ಮಾಡುತ್ತೇವೆ ಎಂದು ಹೇಳಿದೆ.

8. 30 ಸಾವಿರ ಕೋಟಿ ರೂ. ಮೊತ್ತದ ಕೆ-ಅಗ್ರಿ ಫಂಡ್‌: ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಕಿರು ಶೀತಲೀಕರಣ ಸೌಲಭ್ಯಗಳು ಮತ್ತು ಕೃಷಿ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ಈ ಫಂಡ್‌ನ ಸ್ಥಾಪನೆ. ಎಪಿಎಂಸಿಗಳ ಆಧುನೀಕರಣ ಮತ್ತು ಡಿಜಿಟಲೀಕರಣದ ಭರವಸೆ. 5 ಹೊಸ ಕೃಷಿ ಆಧಾರಿತ ಕೈಗಾರಿಕಾ ಕ್ಲಸ್ಟರ್‌ಗಳು ಮತ್ತು 3 ಹೊಸ ಆಹಾರ ಸಂಸ್ಕರಣಾ ಪಾರ್ಕ್‌ಗಳನ್ನು ಸ್ಥಾಪಿಸುವ ಭರವಸೆ.

9. ಟೂರಿಸಂ ಸರ್ಕ್ಯೂಟ್‌ಗಳ ಅಭಿವೃದ್ಧಿಗೆ 1,500 ಕೋಟಿ ರೂ. ವಿನಿಯೋಗ. ಇದರ ಅಡಿಯಲ್ಲಿ ಕಲ್ಯಾಣ ಸರ್ಕ್ಯೂಟ್‌, ಬನವಾಸಿ ಸರ್ಕ್ಯೂಟ್, ಪರಶುರಾಮ ಸರ್ಕ್ಯೂಟ್, ಕಾವೇರಿ ಸರ್ಕ್ಯೂಟ್, ಗಾಣಗಾಪುರ ಕಾರಿಡಾರ್‌ ಅಭಿವೃದ್ಧಿಯ ಭರವಸೆ.

10. ಹಾಲು ಉತ್ಪಾದಕರಿಗೆ ನೀಡುವ ಪ್ರೋತ್ಸಾಹ ಧನವನ್ನು ಲೀಟರ್‌ಗೆ 5 ರೂ.ನಿಂದ 7 ರೂ.ಗೆ ಏರಿಕೆಯ ಭರವಸೆ ನೀಡಲಾಗಿದೆ.

Ramesh Babu

Journalist

Recent Posts

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

11 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

12 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

12 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

13 hours ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

18 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

19 hours ago