ವಿಧಾನಸೌಧದಲ್ಲಿ ಐತಿಹಾಸಿಕ ತೀರ್ಮಾನ: ಒಳಮೀಸಲಾತಿ ಜಾರಿಗೆ ಸಚಿವ ಸಂಪುಟ ಒಪ್ಪಿಗೆ- ಸಚಿವ ಕೆ.ಎಚ್ ಮುನಿಯಪ್ಪ

ವಿಧಾನಸೌಧದಲ್ಲಿ ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಮುಖ್ಯ ಕಾರ್ಯದರ್ಶಿಗಳ ನೇತೃತ್ವದ ಸಮಿತಿಯ ಶಿಫಾರಸುಗಳನ್ನು ಆಧರಿಸಿ ಸರ್ಕಾರ ಗ್ರೂಪ್ ಎ ಗೆ 5.25, ಗ್ರೂಪ್ ಬಿ ಗೆ 5.25 ಮತ್ತು ಗ್ರೂಪ್ ಸಿ ಗೆ 4.5 ಪ್ರಮಾಣದಲ್ಲಿ ಒಳಮೀಸಲಾತಿ ಅನುಷ್ಠಾನಕ್ಕೆ ತೀರ್ಮಾನಿಸಿದೆ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದ್ದಾರೆ.

ಇದು ರಾಜ್ಯದ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯಬೇಕಾದ ದಿನ. 40 ವರ್ಷಗಳ ಹೋರಾಟಕ್ಕೆ ಇಂದು ನ್ಯಾಯ ಸಿಕ್ಕಿದೆ ಎಂದು ಹೇಳಿದರು.

ಸಾಮಾಜಿಕ ನ್ಯಾಯದ ದಿಕ್ಕಿನಲ್ಲಿ ಈ ತೀರ್ಮಾನ ಮಹತ್ವದ್ದಾಗಿದೆ ಬಸವಣ್ಣವರ ಸಮಾನತೆ ತತ್ವವನ್ನು ಸರ್ಕಾರ ಕಾರ್ಯರೂಪಕ್ಕೆ ತಂದಿದೆ ಎಲ್ಲರೂ ಸಮಾನವಾಗಿ ಬದುಕಬೇಕು ಎಂಬ ಮುಖ್ಯಮಂತ್ರಿಗಳ ಬದ್ಧತೆ ಇಂದು ಕಾರ್ಯರೂಪಕ್ಕೆ ಬಂದಿದೆ ಎಂದರು.

ಈ ಪ್ರಕ್ರಿಯೆಯಲ್ಲಿ ಕಾನೂನು ಸಚಿವರು, ಗೃಹ ಸಚಿವರು, ಹಾಗೂ ಮಹಾದೇವಪ್ಪ ಸೇರಿದಂತೆ ಹಲವು ಸಚಿವರು ಪ್ರಮುಖ ಪಾತ್ರ ವಹಿಸಿದ್ದಾರೆ ಅಲ್ಲದೆ ಚಿತ್ರದುರ್ಗದಲ್ಲಿ ನಡೆದ ಐತಿಹಾಸಿಕ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪಕ್ಷದ ನಾಯಕರು ತೆಗೆದುಕೊಂಡ ನಿರ್ಧಾರಕ್ಕೆ ಕೃತಜ್ಞತೆಗಳು ಎಂದು ಹೇಳಿದ್ದಾರೆ.

ರಾಜ್ಯದ 101 ಹಿಂದುಳಿದ ಜಾತಿಗಳಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಇದರಿಂದ ದಶಕಗಳ ಅನ್ಯಾಯಕ್ಕೆ ಅಂತ್ಯವಾಗಲಿದೆ ಎಡಗೈ–ಬಲಗೈ ವಿವಾದಕ್ಕೂ ಇಂದಿನಿಂದ ಅಂತ್ಯ. ನಾವು ಎಲ್ಲರೂ ಅಣ್ಣತಮ್ಮಂದಿರಾಗಿ ಒಗ್ಗಟ್ಟಿನಿಂದ ಮುಂದುವರೆಯುತ್ತೇವೆ. ಸಚಿವ ಸಂಪುಟದ ಈ ತೀರ್ಮಾನವನ್ನು ಸ್ವಾಗತ ಮಾಡುತ್ತೇನೆ. ಮುಖ್ಯಮಂತ್ರಿಗಳ ಕೈ ಬಲಪಡಿಸಿ, ಪಕ್ಷವನ್ನು ಮತ್ತಷ್ಟು ಬಲಪಡಿಸೋಣ ಎಂದು ತಿಳಿಸಿದ್ದಾರೆ.

ಸುದ್ದಿ ಗೋಷ್ಟಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಪರಮೇಶ್ವರ್,ಮಹದೇವಪ್ಪ ,ತಿಮ್ಮಾಪುರ, ಶಿವರಾಜ್ ತಂಗಡಗಿ,ಸುಧಾಕರ್,ಬೈರತಿ ಸುರೇಶ್,ಹೆಚ್.ಕೆ ಪಾಟೀಲ್,ಪ್ರಿಯಾಂಕ ಖರ್ಗೆ,ಕಾನೂನು ಸಲಹೆಗಾರ ಪೊಣ್ಣನ್ನ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

9 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 day ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

1 day ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

1 day ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago