ವಿಧಾನಸೌಧದಲ್ಲಿ ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಮುಖ್ಯ ಕಾರ್ಯದರ್ಶಿಗಳ ನೇತೃತ್ವದ ಸಮಿತಿಯ ಶಿಫಾರಸುಗಳನ್ನು ಆಧರಿಸಿ ಸರ್ಕಾರ ಗ್ರೂಪ್ ಎ ಗೆ 5.25, ಗ್ರೂಪ್ ಬಿ ಗೆ 5.25 ಮತ್ತು ಗ್ರೂಪ್ ಸಿ ಗೆ 4.5 ಪ್ರಮಾಣದಲ್ಲಿ ಒಳಮೀಸಲಾತಿ ಅನುಷ್ಠಾನಕ್ಕೆ ತೀರ್ಮಾನಿಸಿದೆ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದ್ದಾರೆ.
ಇದು ರಾಜ್ಯದ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯಬೇಕಾದ ದಿನ. 40 ವರ್ಷಗಳ ಹೋರಾಟಕ್ಕೆ ಇಂದು ನ್ಯಾಯ ಸಿಕ್ಕಿದೆ ಎಂದು ಹೇಳಿದರು.
ಸಾಮಾಜಿಕ ನ್ಯಾಯದ ದಿಕ್ಕಿನಲ್ಲಿ ಈ ತೀರ್ಮಾನ ಮಹತ್ವದ್ದಾಗಿದೆ ಬಸವಣ್ಣವರ ಸಮಾನತೆ ತತ್ವವನ್ನು ಸರ್ಕಾರ ಕಾರ್ಯರೂಪಕ್ಕೆ ತಂದಿದೆ ಎಲ್ಲರೂ ಸಮಾನವಾಗಿ ಬದುಕಬೇಕು ಎಂಬ ಮುಖ್ಯಮಂತ್ರಿಗಳ ಬದ್ಧತೆ ಇಂದು ಕಾರ್ಯರೂಪಕ್ಕೆ ಬಂದಿದೆ ಎಂದರು.
ಈ ಪ್ರಕ್ರಿಯೆಯಲ್ಲಿ ಕಾನೂನು ಸಚಿವರು, ಗೃಹ ಸಚಿವರು, ಹಾಗೂ ಮಹಾದೇವಪ್ಪ ಸೇರಿದಂತೆ ಹಲವು ಸಚಿವರು ಪ್ರಮುಖ ಪಾತ್ರ ವಹಿಸಿದ್ದಾರೆ ಅಲ್ಲದೆ ಚಿತ್ರದುರ್ಗದಲ್ಲಿ ನಡೆದ ಐತಿಹಾಸಿಕ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪಕ್ಷದ ನಾಯಕರು ತೆಗೆದುಕೊಂಡ ನಿರ್ಧಾರಕ್ಕೆ ಕೃತಜ್ಞತೆಗಳು ಎಂದು ಹೇಳಿದ್ದಾರೆ.
ರಾಜ್ಯದ 101 ಹಿಂದುಳಿದ ಜಾತಿಗಳಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಇದರಿಂದ ದಶಕಗಳ ಅನ್ಯಾಯಕ್ಕೆ ಅಂತ್ಯವಾಗಲಿದೆ ಎಡಗೈ–ಬಲಗೈ ವಿವಾದಕ್ಕೂ ಇಂದಿನಿಂದ ಅಂತ್ಯ. ನಾವು ಎಲ್ಲರೂ ಅಣ್ಣತಮ್ಮಂದಿರಾಗಿ ಒಗ್ಗಟ್ಟಿನಿಂದ ಮುಂದುವರೆಯುತ್ತೇವೆ. ಸಚಿವ ಸಂಪುಟದ ಈ ತೀರ್ಮಾನವನ್ನು ಸ್ವಾಗತ ಮಾಡುತ್ತೇನೆ. ಮುಖ್ಯಮಂತ್ರಿಗಳ ಕೈ ಬಲಪಡಿಸಿ, ಪಕ್ಷವನ್ನು ಮತ್ತಷ್ಟು ಬಲಪಡಿಸೋಣ ಎಂದು ತಿಳಿಸಿದ್ದಾರೆ.
ಸುದ್ದಿ ಗೋಷ್ಟಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಪರಮೇಶ್ವರ್,ಮಹದೇವಪ್ಪ ,ತಿಮ್ಮಾಪುರ, ಶಿವರಾಜ್ ತಂಗಡಗಿ,ಸುಧಾಕರ್,ಬೈರತಿ ಸುರೇಶ್,ಹೆಚ್.ಕೆ ಪಾಟೀಲ್,ಪ್ರಿಯಾಂಕ ಖರ್ಗೆ,ಕಾನೂನು ಸಲಹೆಗಾರ ಪೊಣ್ಣನ್ನ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…