ಬಿಜೆಪಿ ಮತ್ತು ಜೆಡಿಎಸ್ ನಾಯಕರ ನಡುವೆ ಮೈತ್ರಿಯಾಗಿದೆಯೇ ವಿನಃ ಇದಕ್ಕೆ ಮತದಾರರ ಒಪ್ಪಿಗೆ ಇಲ್ಲ ಎಂಬುದನ್ನು ವಿಧಾನ ಪರಿಷತ್ ಉಪಚುನಾವಣೆ ಫಲಿತಾಂಶ ಸ್ಪಷ್ಟಪಡಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಪರಿಷತ್ನ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಜಯಗಳಿಸಿರುವ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣನವರಿಗೆ ಅಭಿನಂದನೆಗಳು. ಇದು ನಮ್ಮ ಸರ್ಕಾರದ 9 ತಿಂಗಳ ಜನಪರವಾದ ಆಡಳಿತ ಮತ್ತು ಸರ್ಕಾರದ ಬಗ್ಗೆ ಪ್ರಜ್ಞಾವಂತ ಮತದಾರರು ಇಟ್ಟಿರುವ ವಿಶ್ವಾಸದ ಗೆಲುವಾಗಿದೆ ಎಂದರು.
ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಟ್ಟಾಗಿ ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ಹೊರತಾಗಿಯೂ ಸೋಲು ಕಂಡಿವೆ. ಇದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಕುಮಾರಸ್ವಾಮಿ ಹಾಗೂ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರ ನಡುವಿನ ಮೈತ್ರಿಯೇ ಹೊರತು ಎರಡೂ ಪಕ್ಷಗಳ ಮತದಾರರ ನಡುವಿನ ಮೈತ್ರಿಯಲ್ಲ ಎಂಬುದು ಸಾಬೀತಾಗಿದೆ ಎಂದು ಹೇಳಿದ್ದಾರೆ.
ಕುಟುಂಬದ ಹಿತಕ್ಕಾಗಿ ಕೋಮುವಾದಿಗಳ ಜೊತೆ ಕೈಜೋಡಿಸಿರುವ ಜೆಡಿಎಸ್ ಪಕ್ಷವನ್ನು ಹಾಗೂ ಸದಾಕಾಲ ಕುಟುಂಬ ರಾಜಕಾರಣದ ವಿರುದ್ಧ ಟೀಕೆ ಮಾಡಿ, ಒಂದು ಕುಟುಂಬವೇ ರಾಜಕೀಯ ಪಕ್ಷದಂತಿರುವ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡ ಬಿಜೆಪಿಯನ್ನು ಮತದಾರ ಬಂಧುಗಳ ಸಾರಾಸಗಟಾಗಿ ತಿರಸ್ಕರಿಸಿದ್ದಾರೆ ಎಂದರು.
ಸ್ವಾರ್ಥ ಸಾಧನೆಯೊಂದೇ ಗುರಿಯಾಗಿರುವ ಈ ಅಪವಿತ್ರ ಮೈತ್ರಿಗೆ ಗ್ಯಾರಂಟಿ, ವಾರೆಂಟಿ ಯಾವುದೂ ಇಲ್ಲ. ಲೋಕಸಭಾ ಚುನಾವಣೆ ಬಳಿಕ ಕುಮಾರಸ್ವಾಮಿ ಮತ್ತವರ ಕುಟುಂಬ ಕೇಸರಿಶಾಲು ಕಿತ್ತೆಸೆಯುವುದು ನಿಶ್ಚಿತ ಎಂದು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…