ಬಿಜೆಪಿ ಮತ್ತು ಜೆಡಿಎಸ್ ನಾಯಕರ ನಡುವೆ ಮೈತ್ರಿಯಾಗಿದೆಯೇ ವಿನಃ ಇದಕ್ಕೆ ಮತದಾರರ ಒಪ್ಪಿಗೆ ಇಲ್ಲ ಎಂಬುದನ್ನು ವಿಧಾನ ಪರಿಷತ್ ಉಪಚುನಾವಣೆ ಫಲಿತಾಂಶ ಸ್ಪಷ್ಟಪಡಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಪರಿಷತ್ನ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಜಯಗಳಿಸಿರುವ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣನವರಿಗೆ ಅಭಿನಂದನೆಗಳು. ಇದು ನಮ್ಮ ಸರ್ಕಾರದ 9 ತಿಂಗಳ ಜನಪರವಾದ ಆಡಳಿತ ಮತ್ತು ಸರ್ಕಾರದ ಬಗ್ಗೆ ಪ್ರಜ್ಞಾವಂತ ಮತದಾರರು ಇಟ್ಟಿರುವ ವಿಶ್ವಾಸದ ಗೆಲುವಾಗಿದೆ ಎಂದರು.
ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಟ್ಟಾಗಿ ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ಹೊರತಾಗಿಯೂ ಸೋಲು ಕಂಡಿವೆ. ಇದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಕುಮಾರಸ್ವಾಮಿ ಹಾಗೂ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರ ನಡುವಿನ ಮೈತ್ರಿಯೇ ಹೊರತು ಎರಡೂ ಪಕ್ಷಗಳ ಮತದಾರರ ನಡುವಿನ ಮೈತ್ರಿಯಲ್ಲ ಎಂಬುದು ಸಾಬೀತಾಗಿದೆ ಎಂದು ಹೇಳಿದ್ದಾರೆ.
ಕುಟುಂಬದ ಹಿತಕ್ಕಾಗಿ ಕೋಮುವಾದಿಗಳ ಜೊತೆ ಕೈಜೋಡಿಸಿರುವ ಜೆಡಿಎಸ್ ಪಕ್ಷವನ್ನು ಹಾಗೂ ಸದಾಕಾಲ ಕುಟುಂಬ ರಾಜಕಾರಣದ ವಿರುದ್ಧ ಟೀಕೆ ಮಾಡಿ, ಒಂದು ಕುಟುಂಬವೇ ರಾಜಕೀಯ ಪಕ್ಷದಂತಿರುವ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡ ಬಿಜೆಪಿಯನ್ನು ಮತದಾರ ಬಂಧುಗಳ ಸಾರಾಸಗಟಾಗಿ ತಿರಸ್ಕರಿಸಿದ್ದಾರೆ ಎಂದರು.
ಸ್ವಾರ್ಥ ಸಾಧನೆಯೊಂದೇ ಗುರಿಯಾಗಿರುವ ಈ ಅಪವಿತ್ರ ಮೈತ್ರಿಗೆ ಗ್ಯಾರಂಟಿ, ವಾರೆಂಟಿ ಯಾವುದೂ ಇಲ್ಲ. ಲೋಕಸಭಾ ಚುನಾವಣೆ ಬಳಿಕ ಕುಮಾರಸ್ವಾಮಿ ಮತ್ತವರ ಕುಟುಂಬ ಕೇಸರಿಶಾಲು ಕಿತ್ತೆಸೆಯುವುದು ನಿಶ್ಚಿತ ಎಂದು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…