ವಿಧಾನ ಪರಿಷತ್ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಲಕ್ಷ್ಮಿಪತಿ ಜಿ ಅಭಿನಂದನೆ

ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಬಿ.ಕೆ. ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರ್, ಪಿ.ವಿ. ಮೋಹನ್, ಶಿವಣ್ಣ ಮಳವಳ್ಳಿ ಹಾಗೂ ವಿನಯ್ ಕಾರ್ತಿಕ್ ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಜಿ. ಲಕ್ಷ್ಮಿಪತಿ ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ದಾಖಲಿಸಿರುವ ಗೆಲುವು ಪಕ್ಷದ ಸಂಘಟನಾ ಶಕ್ತಿ ಹಾಗೂ ಜನರ ವಿಶ್ವಾಸದ ಪ್ರತೀಕವಾಗಿದೆ ಎಂದು ಹೇಳಿದರು.

ಗೆಲುವು ಸಾಧಿಸಿದ ಎಲ್ಲಾ ಸದಸ್ಯರು ಜನರ ಆಶೋತ್ತರಗಳಿಗೆ ಸ್ಪಂದಿಸುತ್ತಾ, ಜನಪರ ಸೇವೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮುಂದುವರಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದ ಅಭಿವೃದ್ಧಿ, ಸಾಮಾಜಿಕ ನ್ಯಾಯ ಹಾಗೂ ಜನಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಅವರ ಕೊಡುಗೆ ಮತ್ತಷ್ಟು ವಿಸ್ತರಿಸಲಿ ಎಂದು ಶುಭ ಹಾರೈಸಿದರು.

ಅಭ್ಯರ್ಥಿಗಳ ಮುಂದಿನ ಕಾರ್ಯಚಟುವಟಿಕೆಗಳಿಗೆ ಯಶಸ್ಸು ಕೋರಿ, ರಾಜ್ಯದ ಸಮಗ್ರ ಅಭಿವೃದ್ಧಿಗೆ ಅವರು ಮಹತ್ವದ ಪಾತ್ರ ವಹಿಸಲಿದ್ದಾರೆ ಎಂದು ಲಕ್ಷ್ಮಿಪತಿ ತಿಳಿಸಿದ್ದಾರೆ.

Ramesh Babu

Journalist

Recent Posts

ಪೆಟ್ರೋಲ್ ಟ್ಯಾಂಕರ್-ಹಾಲಿನ ಟ್ಯಾಂಕರ್ ನಡುವೆ ಅಪಘಾತ: ಬೆಂಕಿಗಾಹುತಿಯಾದ ಎರಡು ಟ್ಯಾಂಕರ್ ಗಳು

ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…

6 hours ago

ಲಾರಿ-ಕ್ರೂಸರ್ ನಡುವೆ ಭೀಕರ ಅಪಘಾತ; ಗೋಕರ್ಣಕ್ಕೆ ತೆರಳುತ್ತಿದ್ದ 6 ಮಂದಿ ಸಾವು: ಹಲವರಿಗೆ ಗಾಯ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲು ಗ್ರಾಮದ ಬಳಗಾರ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಗುರುವಾರ (ಜುಲೈ…

8 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡರಿಗೆ ಹುಟ್ಟುಹಬ್ಬದ ಸಂಭ್ರಮ: ರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಣೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ MMS ಗ್ರೂಪ್ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಹುಟ್ಟುಹಬ್ಬ…

21 hours ago

ಬೆಂ. ಗ್ರಾ ಜಿಲ್ಲೆಯಲ್ಲಿ ಶೇ.87.44ರಷ್ಟು ಎನ್ಯುಮರೇಷನ್ ಫಾರ್ಮ್ ವಿತರಣೆ- ಡಿಸಿ ಡಾ.ಕೆ ಎನ್ ಅನುರಾಧ

ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೇಕಡ 87.44% ಗಣತಿ ನಮೂನೆ ಮತದಾರರಿಗೆ ವಿತರಿಸಲಾಗಿದೆ ಎಂದು…

23 hours ago

ವಸತಿ ಶಾಲೆಯಲ್ಲಿ ಅನುಮಾನಾಸ್ಪದ ವಿದ್ಯಾರ್ಥಿ ಸಾವು: ಶಿಕ್ಷಕರ ವಿರುದ್ಧ ಪೋಷಕರ ಆರೋಪ

ದೇವನಹಳ್ಳಿ: ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 12 ವರ್ಷದ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ…

1 day ago

ಭ್ರಷ್ಟಾಚಾರ ಆರೋಪ: ಮೂವರು ಅಧಿಕಾರಿಗಳ 14 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ…

1 day ago