ಕೇಂದ್ರ ಚುನಾವಣಾ ಆಯೋಗ ವತಿಯಿಂದ ಕರ್ನಾಟಕ ವಿಧಾನ ಪರಿಷತ್ನ ಮೂರು ಸ್ಥಾನಗಳಿಗೆ ಮಂಗಳವಾರ ಉಪ ಚುನಾವಣೆಯ ದಿನಾಂಕ ನಿಗದಿ ಮಾಡಲಾಗಿದೆ. ಜೂನ್ 30ರಂದು ಮತದಾನ ನಡೆಯಲಿದೆ ಮತ್ತು ಅಂದೇ ಫಲಿತಾಂಶ ಸಹ ಪ್ರಕಟವಾಗಲಿದೆ ಎಂದು ತಿಳಿಸಲಾಗಿದೆ.
ಲಕ್ಷ್ಮಣ ಸವದಿ, ಆರ್ ಶಂಕರ್ ಹಾಗೂ ಬಾಬುರಾವ್ ಚಿಂಚನಸೂರ್ ಅವರ ರಾಜೀನಾಮೆಯಿಂದ ತೆರವಾದ ಮೂರು ಸ್ಥಾನಗಳಿಗೆ ಚುನಾವಣಾ ಆಯೋಗ ಇಂದು ಉಪ ಚುನಾವಣೆ ಘೋಷಿಸಲಾಗಿದೆ.
ಜೂನ್ 30ರಂದು ಈ ಉಪ ಚುನಾವಣೆ ನಡೆಯಲಿದ್ದು, ಜೂ. 13ರಂದು ಅಧಿಸೂಚನೆ ಹೊರಡಲಿದೆ. ನಾಮಪತ್ರ ಸಲ್ಲಿಸಲು ಜೂ. 20 ಕಡೇ ದಿನಾಂಕ. ಜೂ. 21ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಜೂ. 23 ಕೊನೆಯ ದಿನವಾಗಿರುತ್ತದೆ. ಜೂ. 30ರ ಬೆಳಗ್ಗೆ 9ರಿಂದ ಸಂಜೆ 4ರ ವರೆಗೆ ಚುನಾವಣೆ ನಡೆಯಲಿದ್ದು, ಅದೇ ದಿನ ಸಂಜೆ 5ಕ್ಕೆ ಫಲಿತಾಂಶ ಪ್ರಕಟವಾಗಲಿದೆ ಎಂದು ಆಯೋಗ ತಿಳಿಸಿದೆ.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…