ಕೇಂದ್ರ ಚುನಾವಣಾ ಆಯೋಗ ವತಿಯಿಂದ ಕರ್ನಾಟಕ ವಿಧಾನ ಪರಿಷತ್ನ ಮೂರು ಸ್ಥಾನಗಳಿಗೆ ಮಂಗಳವಾರ ಉಪ ಚುನಾವಣೆಯ ದಿನಾಂಕ ನಿಗದಿ ಮಾಡಲಾಗಿದೆ. ಜೂನ್ 30ರಂದು ಮತದಾನ ನಡೆಯಲಿದೆ ಮತ್ತು ಅಂದೇ ಫಲಿತಾಂಶ ಸಹ ಪ್ರಕಟವಾಗಲಿದೆ ಎಂದು ತಿಳಿಸಲಾಗಿದೆ.
ಲಕ್ಷ್ಮಣ ಸವದಿ, ಆರ್ ಶಂಕರ್ ಹಾಗೂ ಬಾಬುರಾವ್ ಚಿಂಚನಸೂರ್ ಅವರ ರಾಜೀನಾಮೆಯಿಂದ ತೆರವಾದ ಮೂರು ಸ್ಥಾನಗಳಿಗೆ ಚುನಾವಣಾ ಆಯೋಗ ಇಂದು ಉಪ ಚುನಾವಣೆ ಘೋಷಿಸಲಾಗಿದೆ.
ಜೂನ್ 30ರಂದು ಈ ಉಪ ಚುನಾವಣೆ ನಡೆಯಲಿದ್ದು, ಜೂ. 13ರಂದು ಅಧಿಸೂಚನೆ ಹೊರಡಲಿದೆ. ನಾಮಪತ್ರ ಸಲ್ಲಿಸಲು ಜೂ. 20 ಕಡೇ ದಿನಾಂಕ. ಜೂ. 21ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಜೂ. 23 ಕೊನೆಯ ದಿನವಾಗಿರುತ್ತದೆ. ಜೂ. 30ರ ಬೆಳಗ್ಗೆ 9ರಿಂದ ಸಂಜೆ 4ರ ವರೆಗೆ ಚುನಾವಣೆ ನಡೆಯಲಿದ್ದು, ಅದೇ ದಿನ ಸಂಜೆ 5ಕ್ಕೆ ಫಲಿತಾಂಶ ಪ್ರಕಟವಾಗಲಿದೆ ಎಂದು ಆಯೋಗ ತಿಳಿಸಿದೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…