ವಿಧಾನ ಪರಿಷತ್ ಸ್ಥಾನಕ್ಕೆ ಸಿ.ಪಿ.ಯೋಗೇಶ್ವರ್ ರಾಜೀನಾಮೆ

ವಿಧಾನ ಪರಿಷತ್ ಸ್ಥಾನಕ್ಕೆ ಸಿ.ಪಿ.ಯೋಗೇಶ್ವರ್ ಅವರು ಇಂದು ರಾಜೀನಾಮೆ ಸಲ್ಲಿಸಿದ್ದಾರೆ.

ಇಂದು ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರವನ್ನು ನೀಡಿದ್ದಾರೆ.

ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡಲ್ಲ. ಪಕ್ಷೇತರವಾಗಿ ನಿಲ್ಲುತ್ತೇನೆ. ಈ ಕ್ಷಣಕ್ಕೂ ಬಿಜೆಪಿ ಟಿಕೆಟ್ ನೀಡಿದರೆ ಸ್ಪರ್ಧೆ ಮಾಡುತ್ತೇನೆ. ಇಲ್ಲದಿದ್ದಲ್ಲಿ ಪಕ್ಷೇತರ ಸ್ಪರ್ಧೆ ಮಾಡುವೆ ಎಂದು ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.

ರಾಜ್ಯ ವಿಧಾನಸಭಾ ಉಪಚುನಾವಣೆ ಕಾವು ಜೋರಾಗಿದ್ದು, ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ಈ ಮೂರೂ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಕಾಂಗ್ರೆಸ್​​, ಬಿಜೆಪಿ ಮತ್ತು ಜೆಡಿಎಸ್​​ ಯಾರಿಗೆ ಟಿಕೆಟ್​ ನೀಡಬೇಕು ಎಂಬ ಕಸರತ್ತಿನಲ್ಲಿ ತೊಡಗಿವೆ.

ಚನ್ನಪಟ್ಟಣ ಕ್ಷೇತ್ರದ ಟಿಕೆಟ್​​ ಜೆಡಿಎಸ್​​ಗೆ ಬಿಟ್ಟಿಕೊಟ್ಟಿರುವುದು ಬಿಜೆಪಿಗೆ ಸಮಸ್ಯೆಯಾಗಿದೆ. ಈ ಕಾರಣ ಚನ್ನಪಟ್ಟಣದ ಟಿಕೆಟ್​ ಆಕಾಂಕ್ಷಿ ಬಿಜೆಪಿ ಎಂಎಲ್​ಸಿ ಸಿ.ಪಿ ಯೋಗೇಶ್ವರ್​​​ ಅವರು ರಾಜೀನಾಮೆ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!