ಟಿವಿಎಸ್ ಎಕ್ಸ್ಎಲ್ ಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ವೃದ್ಧ ದಂಪತಿ ಸಾವನ್ನಪ್ಪಿರುವ ಘಟನೆ ಸೋಮವಾರ(ಡಿ.23) ಸಂಜೆ ಸುಮಾರು 6:30ರಲ್ಲಿ ತಾಲೂಕಿನ ಕನ್ನಮಂಗಲ ಗೇಟ್ ಬಳಿಯ ಪೆಟ್ರೋಲ್ ಬಂಕ್ ತಿರುವಿನಲ್ಲಿ ನಡೆದಿದೆ.
ಮೃತ ದುರ್ದೈವಿಗಳನ್ನು ರಾಮದೇವನಹಳ್ಳಿ ನಿವಾಸಿಗಳಾದ ಅನ್ನದಾನಪ್ಪ (66), ನಾಗರತ್ನಮ್ಮ (55) ಎಂದು ಗುರುತಿಸಲಾಗಿದೆ.
ಮೃತರು ನಿನ್ನೆ ಸಂಜೆ ಮಧುರೆ ಶನಿ ಮಹಾತ್ಮ ಸ್ವಾಮಿ ದೇವರ ದರ್ಶನ ಪಡೆಯಲು ರಾಮದೇವನಹಳ್ಳಿ ಗ್ರಾಮದಿಂದ ಬರುವ ವೇಳೆ ಕನ್ನಮಂಗಲ ಗೇಟ್ ಬಳಿಯ ಪೆಟ್ರೋಲ್ ಬಂಕ್ ತಿರುವಿನಲ್ಲಿ ಕ್ಯಾಂಟರ್ ಏಕಾಏಕಿ ಬಂದು ಡಿಕ್ಕಿ ಹೊಡೆದಿದೆ. ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ದಂಪತಿಯ ತಲೆಗೆ ತೀವ್ರ ಪೆಟ್ಟಾಗಿ ರಕ್ತ ಸ್ರಾವವಾಗಿತ್ತು. ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಬ್ಬರು ಅಸುನೀಗಿದ್ದಾರೆ.
ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…
ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…
ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…
ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ…