ಟಿವಿಎಸ್ ಎಕ್ಸ್ಎಲ್ ಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ವೃದ್ಧ ದಂಪತಿ ಸಾವನ್ನಪ್ಪಿರುವ ಘಟನೆ ಸೋಮವಾರ(ಡಿ.23) ಸಂಜೆ ಸುಮಾರು 6:30ರಲ್ಲಿ ತಾಲೂಕಿನ ಕನ್ನಮಂಗಲ ಗೇಟ್ ಬಳಿಯ ಪೆಟ್ರೋಲ್ ಬಂಕ್ ತಿರುವಿನಲ್ಲಿ ನಡೆದಿದೆ.
ಮೃತ ದುರ್ದೈವಿಗಳನ್ನು ರಾಮದೇವನಹಳ್ಳಿ ನಿವಾಸಿಗಳಾದ ಅನ್ನದಾನಪ್ಪ (66), ನಾಗರತ್ನಮ್ಮ (55) ಎಂದು ಗುರುತಿಸಲಾಗಿದೆ.
ಮೃತರು ನಿನ್ನೆ ಸಂಜೆ ಮಧುರೆ ಶನಿ ಮಹಾತ್ಮ ಸ್ವಾಮಿ ದೇವರ ದರ್ಶನ ಪಡೆಯಲು ರಾಮದೇವನಹಳ್ಳಿ ಗ್ರಾಮದಿಂದ ಬರುವ ವೇಳೆ ಕನ್ನಮಂಗಲ ಗೇಟ್ ಬಳಿಯ ಪೆಟ್ರೋಲ್ ಬಂಕ್ ತಿರುವಿನಲ್ಲಿ ಕ್ಯಾಂಟರ್ ಏಕಾಏಕಿ ಬಂದು ಡಿಕ್ಕಿ ಹೊಡೆದಿದೆ. ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ದಂಪತಿಯ ತಲೆಗೆ ತೀವ್ರ ಪೆಟ್ಟಾಗಿ ರಕ್ತ ಸ್ರಾವವಾಗಿತ್ತು. ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಬ್ಬರು ಅಸುನೀಗಿದ್ದಾರೆ.
ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…
ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…
ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…