ವಿಧಿಯಾಟ: ಹೊರಟಿದ್ದು ನಾಮಕರಣ‌ ಕಾರ್ಯಕ್ರಮಕ್ಕೆ, ತಲುಪಿದ್ದು ಮಸಣ‌: ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರ ದುರ್ಮರಣ

ಅವರೆಲ್ಲರೂ ಮನೆಯಿಂದ ಖುಷಿ ಖುಷಿಯಾಗಿ ಸಂಬಂಧಿಕರ ನಾಮಕರಣಕ್ಕೆ ಎಂದು ಹೊರಟಿದ್ದರು. ಇನ್ನೇನು ಕೆಲವೇ ನಿಮಿಷದಲ್ಲಿ ನಾಮಕರಣದಲ್ಲಿ ಭಾಗಿ ಆಗುತ್ತೇವೆ ಎಂದು ಕೊಂಡವರು, ಸೇರಿದ್ದ ಸ್ಮಶಾನಕ್ಕೆ. ಒಂದೇ ಕುಟುಂಬದ ಮೂವರ ಬಾಳಲ್ಲಿ ಇಂದು ವಿಧಿ ಆಟವಾಡಿದೆ. ಈ ಕುರಿತ ವರದಿ ಇಲ್ಲಿದೆ ನೋಡಿ……

ಹೌದು ಹೀಗೆ ನಜ್ಜುಗುಜ್ಜಾದ ಕಾರು, ಸ್ಥಳ ಪರಿಶೀಲನೆಗೆ ಮುಂದಾಗಿರುವ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿಕೆ ಬಾಬಾ, ಈ ಎಲ್ಲಾ ದೃಶ್ಯಗಳು ಕಂಡುಬಂದಿದ್ದು ನೆಲಮಂಗಲ ಸಮೀಪದ ಡಾಬಸ್ ಪೇಟೆ ಬಳಿ. ಇಂದು ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಗೋಪಾಲ್(60) ಶಶಿಕಲಾ(55) ದೀಪಿಕಾ (35)  ಸಾವನಪ್ಪಿದ್ದಾರೆ.  ಶಶಿಕಲಾ ಮುಂಬದಿಯ ಸೀಟ್ ನಲ್ಲಿ ಕುಳಿತ್ತಿದ್ದರು, ಅವರ ಹಿಂಭಾಗದಲ್ಲಿ ದೀಪಿಕಾ ಕುಳಿತಿದ್ದರಿಂದ ಅಪಘಾತದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಗಾಯಾಳು ಚಾಲಕ ಗೋಪಾಲ್ ರನ್ನು ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿ ಆಗದೆ ಆತ‌ ಕೂಡ ಸಾವನಪ್ಪಿದ್ದಾನೆ. ಇನ್ನೂ ಕಾರಿನಲ್ಲಿ ಇಬ್ಬರು ಮಕ್ಕಳಿದ್ದು, ಇಬ್ಬರೂ ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇನ್ನೂ ಗೋಪಾಲ್ ಕುಟುಂಬ ತುಮಕೂರಿನ ಸಂಬಂಧಿಕರ ಮನೆಯಲ್ಲಿ ನಾಮಕರಣಕ್ಕಾಗಿ, ಬೆಂಗಳೂರಿನ ಮಲ್ಲೇಶ್ವರಂ ನಿಂದ ಹೊರಟು ನೆಲಮಂಗಲದ ದಾಬಸ್ ಪೇಟೆ ಬಳಿ ಸಾವನಪ್ಪಿದ್ದಾರೆ. ಬೆಂಗಳೂರಿನಿಂದ ತುಮಕೂರಿನ ಕಡೆಗೆ ಪ್ರಯಾಣ ಬೆಳೆಸುತ್ತಿದ್ದ ಲಾರಿಯೊಂದು ಮುಂದೆ ಚಮಕ್ ನೀಡಿದೆ‌. ಹೀಗಾಗಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ‌.

ರಾಷ್ಟ್ರೀಯ ಹೆದ್ದಾರಿ ಆಗಿದ್ದರಿಂದ ಕಾರಿನ ವೇಗ ಕೂಡ ಹೆಚ್ಚಾಗಿತ್ತು. ಕಾರಿನ ರಭಸಕ್ಕೆ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಇನ್ನೂ ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ ಕೆ ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ‌.

ನೆಲಮಂಗಲ ಸಂಚಾರಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲೀಸರು ತನಿಖೆ ನಡೆಸುತ್ತಿದ್ದಾರೆ.

ಒಟ್ಟಾರೆ ಇನ್ನೇನು ಕೆಲವೇ ನಿಮಿಷಗಳಲ್ಲಿ ಶುಭ ಕಾರ್ಯದಲ್ಲಿ ಭಾಗಿಯಾಗುತ್ತೇನೆ ಎಂದುಕೊಂಡಿದ್ದವರು, ಈಗ ಹೆಣವಾಗಿ ಸ್ಮಶಾನ ಸೇರಿದ್ದು ಮಾತ್ರ ವಿಧಿಯಾಟ.

Ramesh Babu

Journalist

Recent Posts

“ಉತ್ತರ ಕರ್ನಾಟಕದ ಗ್ರಾಮೀಣ ನಾಗರ ಪಂಚಮಿ: ಹೆಣ್ಮಕ್ಕಳ ಜೋಕಾಲಿ ಸಂಭ್ರಮ”

ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ…

4 minutes ago

ಗ್ರಾಪಂ ನೌಕರರ ಬೇಡಿಕೆಗಳ ಈಡೇರಿಕೆಗೆ ಜಿಪಂ ಮುಂದೆ ಪ್ರತಿಭಟನೆ

ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದ ಗ್ರಾಮ…

1 hour ago

RCB ಕಾಲ್ತುಳಿತ ಪ್ರಕರಣ: ಪೊಲಿಸ್ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆದ ರಾಜ್ಯ ಸರ್ಕಾರ: ಅಚ್ಚರಿ ಹಾಗೂ ಚರ್ಚೆಗೆ ಗ್ರಾಸವಾದ ಸರ್ಕಾರದ ನಡೆ

ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ…

2 hours ago

ದೇವಸ್ಥಾನದಲ್ಲಿ ಕಳ್ಳನ ಕೈಚಳಕ: ಬೈಕ್ ಸಮೇತ ಕಳ್ಳನ ಬಂಧನ

ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…

5 hours ago

ನೊಂದವರ ನೋವಾ ನೋಯದವರೆತ್ತ ಬಲ್ಲರೋ……

ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…

13 hours ago

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

1 day ago