ವಿಧಿಯಾಟ: ಹೊರಟಿದ್ದು ನಾಮಕರಣ‌ ಕಾರ್ಯಕ್ರಮಕ್ಕೆ, ತಲುಪಿದ್ದು ಮಸಣ‌: ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರ ದುರ್ಮರಣ

ಅವರೆಲ್ಲರೂ ಮನೆಯಿಂದ ಖುಷಿ ಖುಷಿಯಾಗಿ ಸಂಬಂಧಿಕರ ನಾಮಕರಣಕ್ಕೆ ಎಂದು ಹೊರಟಿದ್ದರು. ಇನ್ನೇನು ಕೆಲವೇ ನಿಮಿಷದಲ್ಲಿ ನಾಮಕರಣದಲ್ಲಿ ಭಾಗಿ ಆಗುತ್ತೇವೆ ಎಂದು ಕೊಂಡವರು, ಸೇರಿದ್ದ ಸ್ಮಶಾನಕ್ಕೆ. ಒಂದೇ ಕುಟುಂಬದ ಮೂವರ ಬಾಳಲ್ಲಿ ಇಂದು ವಿಧಿ ಆಟವಾಡಿದೆ. ಈ ಕುರಿತ ವರದಿ ಇಲ್ಲಿದೆ ನೋಡಿ……

ಹೌದು ಹೀಗೆ ನಜ್ಜುಗುಜ್ಜಾದ ಕಾರು, ಸ್ಥಳ ಪರಿಶೀಲನೆಗೆ ಮುಂದಾಗಿರುವ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿಕೆ ಬಾಬಾ, ಈ ಎಲ್ಲಾ ದೃಶ್ಯಗಳು ಕಂಡುಬಂದಿದ್ದು ನೆಲಮಂಗಲ ಸಮೀಪದ ಡಾಬಸ್ ಪೇಟೆ ಬಳಿ. ಇಂದು ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಗೋಪಾಲ್(60) ಶಶಿಕಲಾ(55) ದೀಪಿಕಾ (35)  ಸಾವನಪ್ಪಿದ್ದಾರೆ.  ಶಶಿಕಲಾ ಮುಂಬದಿಯ ಸೀಟ್ ನಲ್ಲಿ ಕುಳಿತ್ತಿದ್ದರು, ಅವರ ಹಿಂಭಾಗದಲ್ಲಿ ದೀಪಿಕಾ ಕುಳಿತಿದ್ದರಿಂದ ಅಪಘಾತದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಗಾಯಾಳು ಚಾಲಕ ಗೋಪಾಲ್ ರನ್ನು ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿ ಆಗದೆ ಆತ‌ ಕೂಡ ಸಾವನಪ್ಪಿದ್ದಾನೆ. ಇನ್ನೂ ಕಾರಿನಲ್ಲಿ ಇಬ್ಬರು ಮಕ್ಕಳಿದ್ದು, ಇಬ್ಬರೂ ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇನ್ನೂ ಗೋಪಾಲ್ ಕುಟುಂಬ ತುಮಕೂರಿನ ಸಂಬಂಧಿಕರ ಮನೆಯಲ್ಲಿ ನಾಮಕರಣಕ್ಕಾಗಿ, ಬೆಂಗಳೂರಿನ ಮಲ್ಲೇಶ್ವರಂ ನಿಂದ ಹೊರಟು ನೆಲಮಂಗಲದ ದಾಬಸ್ ಪೇಟೆ ಬಳಿ ಸಾವನಪ್ಪಿದ್ದಾರೆ. ಬೆಂಗಳೂರಿನಿಂದ ತುಮಕೂರಿನ ಕಡೆಗೆ ಪ್ರಯಾಣ ಬೆಳೆಸುತ್ತಿದ್ದ ಲಾರಿಯೊಂದು ಮುಂದೆ ಚಮಕ್ ನೀಡಿದೆ‌. ಹೀಗಾಗಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ‌.

ರಾಷ್ಟ್ರೀಯ ಹೆದ್ದಾರಿ ಆಗಿದ್ದರಿಂದ ಕಾರಿನ ವೇಗ ಕೂಡ ಹೆಚ್ಚಾಗಿತ್ತು. ಕಾರಿನ ರಭಸಕ್ಕೆ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಇನ್ನೂ ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ ಕೆ ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ‌.

ನೆಲಮಂಗಲ ಸಂಚಾರಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲೀಸರು ತನಿಖೆ ನಡೆಸುತ್ತಿದ್ದಾರೆ.

ಒಟ್ಟಾರೆ ಇನ್ನೇನು ಕೆಲವೇ ನಿಮಿಷಗಳಲ್ಲಿ ಶುಭ ಕಾರ್ಯದಲ್ಲಿ ಭಾಗಿಯಾಗುತ್ತೇನೆ ಎಂದುಕೊಂಡಿದ್ದವರು, ಈಗ ಹೆಣವಾಗಿ ಸ್ಮಶಾನ ಸೇರಿದ್ದು ಮಾತ್ರ ವಿಧಿಯಾಟ.

Ramesh Babu

Journalist

Recent Posts

ಮಧುರನಹೊಸಹಳ್ಳಿ ಕಾಲೋನಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಸಂಭ್ರಮ

ದೊಡ್ಡಬಳ್ಳಾಪುರ ತಾಲೂಕಿನ ಮಧುರನಹೊಸಹಳ್ಳಿ ಕಾಲೋನಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಪಟಾಕಿ ಸಿಡಿಸಿ, ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ…

11 hours ago

14 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ

14 ವರ್ಷದ ಮಗಳನ್ನು ಕೊಂದು ತಾಯಿ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್ ಫೀಲ್ಡ್ ಬಳಿಯ ಇಮ್ಮಡಿಹಳ್ಳಿಯಲ್ಲಿ ನಡೆದಿದೆ... ಮಗಳು…

13 hours ago

ಮನೆ ಆವರಣದಲ್ಲೇ ವ್ಯಕ್ತಿಯ ಬರ್ಬರ ಕೊಲೆ

ಮನೆ ಆವರಣದಲ್ಲೇ ವ್ಯಕ್ತಿಯ ಬರ್ಬರ ಕೊಲೆಯಾಗಿರುವ ಘಟನೆ ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ…

16 hours ago

ತಂದೆಯಿಂದಲೇ 6 ವರ್ಷದ ಮಗನ ಕೊಲೆ: ಕಾರಣ ಏನು ಗೊತ್ತಾ….?

ವಿಜಯಪುರದಲ್ಲೋಂದು ವಿಚಿತ್ರ, ಅಮಾನವೀಯ, ಕರಳುಹಿಂಡುವ ಘಟನೆ ನಡೆದಿದೆ.‌ ಇಲ್ಲೊಬ್ಬ ಕಿರಾತಕ ತಂದೆ ಮಗನನ್ನೇ ಕೊಲೆ ಮಾಡಿದ್ದಾನೆ. ಮಗ ನೋಡಲು ತನ್ನಂತೆ…

17 hours ago

ಬಾಬಾ ಸಾಹೇಬ್ ಅಂಬೇಡ್ಕರ್ ಹಾದಿಯಲ್ಲಿ ನಾವು ಸಾಗಬೇಕು- ದೊಡ್ಡಬಳ್ಳಾಪುರ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಡಿ.ಎಂ.ರೇಣುಕಾಮೂರ್ತಿ

ಲೋಕಸೇವಾನಿರತ ಶ್ರೀ ಡಿ. ಕೊಂಗಾಡಿಯಪ್ಪ ಸ್ಮಾರಕ ವಿದ್ಯಾ ಸಂಸ್ಥೆ (ರಿ), ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾವಿದ್ಯಾಲಯ ವತಿಯಿಂದ ಸಂವಿಧಾನ ಶಿಲ್ಪಿ,…

19 hours ago

ಮನೆಯಲ್ಲಿ ವ್ಯಕ್ತಿ ನೇಣಿಗೆ ಶರಣು

ಮನೆಯಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ನಿನ್ನೆ (ಏ.13) ರಾತ್ರಿ ನಡೆದಿದೆ... ವಿನೋದ್ ಕುಮಾರ್(44),…

23 hours ago